<p><strong>ಕೋಲಾರ:</strong> ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ಗೆ ಇಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿ.ಕೃಷ್ಣ ಮತ್ತು ಉಪಾಧ್ಯಕ್ಷರಾಗಿ ಎಂ.ಮುನಿರಾಜು ಅವಿರೋಧ ಆಯ್ಕೆಯಾದರು.</p>.<p>ಸೊಸೈಟಿಯ 12 ನಿರ್ದೇಶಕರ ಒಮ್ಮತ ತೀರ್ಮಾನದಂತೆ ಕೃಷ್ಣ ಮತ್ತು ಮುನಿರಾಜು ಅವರನ್ನು ಹೊರತುಪಡಿಸಿ ಇತರರು ಉಮೇದುವಾರಿಕೆ ಸಲ್ಲಿಸಲಿಲ್ಲಿ. ಹೀಗಾಗಿ ಚುನಾವಣಾಧಿಕಾರಿಯು ಈ ಇಬ್ಬರು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಕೃಷ್ಣ, ‘ಸೊಸೈಟಿ ಕಟ್ಟಿ ಬೆಳೆಸಿದ ಹಿರಿಯರ ಹಾದಿಯಲ್ಲೇ ಸಾಗಿ ಸೊಸೈಟಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುಲು ಶ್ರಮಿಸುತ್ತೇನೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸೊಸೈಟಿಯಿಂದ ಸಹಾಯ ನೀಡುತ್ತೇವೆ’ ಎಂದರು.</p>.<p>‘ಸೊಸೈಟಿಯ ಆಡಳಿತ ಕಾರ್ಯಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ. ನಿರ್ದೇಶಕರ ಸಲಹೆ ಸೂಚನೆ ಪಡೆದು ಸೊಸೈಟಿಯನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುತ್ತೇನೆ’ ಎಂದು ಹೇಳಿದರು.</p>.<p>‘ಸೊಸೈಟಿ ಬೆಳವಣಿಗೆಗೆ ದುಡಿಯುತ್ತೇನೆ. ಸೊಸೈಟಿಯ ಹಣಕಾಸು ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ಕೊಡುತ್ತೇವೆ’ ಎಂದು ಮುನಿರಾಜು ತಿಳಿಸಿದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಸೂಚಕರಾಗಿ ರಾಜಣ್ಣ ಹಾಗೂ ಕೆ.ಎಂ.ಮುನಿಕೃಷ್ಣ ಅನುಮೋದಕರಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ರವಿಚಂದ್ರನ್ ಸೂಚಕರಾಗಿ ಹಾಗೂ ಎನ್.ವೆಂಕಟೇಶ್ ಅನುಮೋದಕರಾದರು. ಸೊಸೈಟಿಯ ನಿಕಟ ಪೂರ್ವ ಅಧ್ಯಕ್ಷ ರಾಜಣ್ಣ ಮಾತನಾಡಿದರು.</p>.<p>ಮಾಜಿ ಸಚಿವ ವರ್ತೂರು ಪ್ರಕಾಶ್, ಸೊಸೈಟಿ ನಿರ್ದೇಶಕರಾದ ದೇವೇಂದ್ರನಾಥ್, ಕೆ.ನಟರಾಜ್, ಎಸ್.ಸುರೇಶ್, ಎಸ್.ಎಂ.ನಾಗರಾಜ್, ಪುಷ್ಪಲತಾ, ಕೆ.ಬಬಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ಗೆ ಇಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿ.ಕೃಷ್ಣ ಮತ್ತು ಉಪಾಧ್ಯಕ್ಷರಾಗಿ ಎಂ.ಮುನಿರಾಜು ಅವಿರೋಧ ಆಯ್ಕೆಯಾದರು.</p>.<p>ಸೊಸೈಟಿಯ 12 ನಿರ್ದೇಶಕರ ಒಮ್ಮತ ತೀರ್ಮಾನದಂತೆ ಕೃಷ್ಣ ಮತ್ತು ಮುನಿರಾಜು ಅವರನ್ನು ಹೊರತುಪಡಿಸಿ ಇತರರು ಉಮೇದುವಾರಿಕೆ ಸಲ್ಲಿಸಲಿಲ್ಲಿ. ಹೀಗಾಗಿ ಚುನಾವಣಾಧಿಕಾರಿಯು ಈ ಇಬ್ಬರು ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷ ಕೃಷ್ಣ, ‘ಸೊಸೈಟಿ ಕಟ್ಟಿ ಬೆಳೆಸಿದ ಹಿರಿಯರ ಹಾದಿಯಲ್ಲೇ ಸಾಗಿ ಸೊಸೈಟಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುಲು ಶ್ರಮಿಸುತ್ತೇನೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸೊಸೈಟಿಯಿಂದ ಸಹಾಯ ನೀಡುತ್ತೇವೆ’ ಎಂದರು.</p>.<p>‘ಸೊಸೈಟಿಯ ಆಡಳಿತ ಕಾರ್ಯಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ. ನಿರ್ದೇಶಕರ ಸಲಹೆ ಸೂಚನೆ ಪಡೆದು ಸೊಸೈಟಿಯನ್ನು ಪ್ರಗತಿ ಪಥದಲ್ಲಿ ಕೊಂಡೊಯ್ಯುತ್ತೇನೆ’ ಎಂದು ಹೇಳಿದರು.</p>.<p>‘ಸೊಸೈಟಿ ಬೆಳವಣಿಗೆಗೆ ದುಡಿಯುತ್ತೇನೆ. ಸೊಸೈಟಿಯ ಹಣಕಾಸು ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ಕೊಡುತ್ತೇವೆ’ ಎಂದು ಮುನಿರಾಜು ತಿಳಿಸಿದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಸೂಚಕರಾಗಿ ರಾಜಣ್ಣ ಹಾಗೂ ಕೆ.ಎಂ.ಮುನಿಕೃಷ್ಣ ಅನುಮೋದಕರಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ರವಿಚಂದ್ರನ್ ಸೂಚಕರಾಗಿ ಹಾಗೂ ಎನ್.ವೆಂಕಟೇಶ್ ಅನುಮೋದಕರಾದರು. ಸೊಸೈಟಿಯ ನಿಕಟ ಪೂರ್ವ ಅಧ್ಯಕ್ಷ ರಾಜಣ್ಣ ಮಾತನಾಡಿದರು.</p>.<p>ಮಾಜಿ ಸಚಿವ ವರ್ತೂರು ಪ್ರಕಾಶ್, ಸೊಸೈಟಿ ನಿರ್ದೇಶಕರಾದ ದೇವೇಂದ್ರನಾಥ್, ಕೆ.ನಟರಾಜ್, ಎಸ್.ಸುರೇಶ್, ಎಸ್.ಎಂ.ನಾಗರಾಜ್, ಪುಷ್ಪಲತಾ, ಕೆ.ಬಬಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>