<p><strong>ವೇಮಗಲ್:</strong> ಹೋಬಳಿಯ ಮದ್ದೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 3ರ ವಿಶ್ವ ಸೈಕಲ್ ದಿನದ ಅಂಗವಾಗಿ ದೂರದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಗ್ರಾಮಸ್ಥರ ನೆರವಿನಿಂದ ಉಚಿತವಾಗಿ ಸೈಕಲ್ ವಿತರಿಸಲಾಯಿತು.</p>.<p>ಈ ವೇಳೆ ಮದ್ದೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಬಿ.ರೇವಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಗ್ರಾಮದ ದಾನಿಗಳು ಉಚಿತವಾಗಿ ಸೈಕಲ್ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.</p>.<p>ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಸರ್ಕಾರದಿಂದ ಸಿಗುವ ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.</p>.<p>ಗ್ರಾಮಸ್ಥರಾದ ಎಂ.ಆರ್.ಶ್ರೀನಿವಾಸ್ ಗೌಡ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಆರ್.ರವಿಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಕೆ.ಶಿವರಾಜ್, ಸಹ ಶಿಕ್ಷಕ ಸುದರ್ಶನ್, ಮಲ್ಲಿಕಾರ್ಜುನ್ ಹಾಗೂ ಷಣ್ಮುಖಚಾರಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-18-1481151439</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೇಮಗಲ್:</strong> ಹೋಬಳಿಯ ಮದ್ದೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 3ರ ವಿಶ್ವ ಸೈಕಲ್ ದಿನದ ಅಂಗವಾಗಿ ದೂರದ ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಗ್ರಾಮಸ್ಥರ ನೆರವಿನಿಂದ ಉಚಿತವಾಗಿ ಸೈಕಲ್ ವಿತರಿಸಲಾಯಿತು.</p>.<p>ಈ ವೇಳೆ ಮದ್ದೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿ.ಬಿ.ರೇವಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಗ್ರಾಮದ ದಾನಿಗಳು ಉಚಿತವಾಗಿ ಸೈಕಲ್ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.</p>.<p>ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಸರ್ಕಾರದಿಂದ ಸಿಗುವ ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.</p>.<p>ಗ್ರಾಮಸ್ಥರಾದ ಎಂ.ಆರ್.ಶ್ರೀನಿವಾಸ್ ಗೌಡ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಎಂ.ಆರ್.ರವಿಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಕೆ.ಶಿವರಾಜ್, ಸಹ ಶಿಕ್ಷಕ ಸುದರ್ಶನ್, ಮಲ್ಲಿಕಾರ್ಜುನ್ ಹಾಗೂ ಷಣ್ಮುಖಚಾರಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಮತ್ತು ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-18-1481151439</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>