<p><strong>ವೇಮಗಲ್</strong>: ಹೋಬಳಿಯ ಸೀತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೇನಹಳ್ಳಿ ಗ್ರಾಮದಲ್ಲಿ ವೀರಚೊಕ್ಕಪ್ಪ ಸ್ವಾಮಿ ಮಹಾ ಕುಂಭಾಭಿಷೇಕ ಮಹೋತ್ಸವ ಅತ್ಯಂತ ವೈಭವದಿಂದ ನಡೆಯಿತು.</p>.<p>ಗ್ರಾಮದಲ್ಲಿ ನಿರ್ಮಾಣವಾಗಿದ್ದ ಮಿನಿ ಕಲ್ಯಾಣ ಮಂಟಪವನ್ನು ಉದ್ಘಾಟಿಸಲಾಯಿತು. ಜೊತೆಗೆ ಕುಂಭಾಭಿಷೇಕ ಅಂಗವಾಗಿ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಜೊತೆಗೆ ನೂರಾರು ಭಕ್ತರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.</p>.<p>ಭಾನುವಾರ ಸಾಯಂಕಾಲ ಗಣಪತಿ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಸೋಮವಾರ ಮುಂಜಾನೆಯಿಂದಲೇ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಬೆಳಗ್ಗೆ 7 ಗಂಟೆಯಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಮಂಗಳವಾದ್ಯಗಳ ಘೋಷದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಳಸ ಪ್ರದಕ್ಷಿಣೆ ನಡೆಸಿ, ದೇವಸ್ಥಾನದ ಗೋಪುರಕ್ಕೆ ಕುಂಭಾಭಿಷೇಕ ಮಾಡಲಾಯಿತು. ಬಲಿ ಪ್ರಧಾನ, ಗೋಪೂಜೆ ಮತ್ತು ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿತು.</p>.<p>ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-18-1107069261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೇಮಗಲ್</strong>: ಹೋಬಳಿಯ ಸೀತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೇನಹಳ್ಳಿ ಗ್ರಾಮದಲ್ಲಿ ವೀರಚೊಕ್ಕಪ್ಪ ಸ್ವಾಮಿ ಮಹಾ ಕುಂಭಾಭಿಷೇಕ ಮಹೋತ್ಸವ ಅತ್ಯಂತ ವೈಭವದಿಂದ ನಡೆಯಿತು.</p>.<p>ಗ್ರಾಮದಲ್ಲಿ ನಿರ್ಮಾಣವಾಗಿದ್ದ ಮಿನಿ ಕಲ್ಯಾಣ ಮಂಟಪವನ್ನು ಉದ್ಘಾಟಿಸಲಾಯಿತು. ಜೊತೆಗೆ ಕುಂಭಾಭಿಷೇಕ ಅಂಗವಾಗಿ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಜೊತೆಗೆ ನೂರಾರು ಭಕ್ತರು ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.</p>.<p>ಭಾನುವಾರ ಸಾಯಂಕಾಲ ಗಣಪತಿ ಪೂಜೆಯೊಂದಿಗೆ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಸೋಮವಾರ ಮುಂಜಾನೆಯಿಂದಲೇ ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಬೆಳಗ್ಗೆ 7 ಗಂಟೆಯಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಮಂಗಳವಾದ್ಯಗಳ ಘೋಷದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಳಸ ಪ್ರದಕ್ಷಿಣೆ ನಡೆಸಿ, ದೇವಸ್ಥಾನದ ಗೋಪುರಕ್ಕೆ ಕುಂಭಾಭಿಷೇಕ ಮಾಡಲಾಯಿತು. ಬಲಿ ಪ್ರಧಾನ, ಗೋಪೂಜೆ ಮತ್ತು ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿತು.</p>.<p>ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-18-1107069261</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>