<p><strong>ಬಂಗಾರಪೇಟೆ:</strong> ಬಂಗಾರಪೇಟೆಯಲ್ಲಿ ಬಂಗಾರ ಮತ್ತು ಬೆಳ್ಳಿ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸುಮಾರು ₹ 4.17 ಲಕ್ಷ ಬೆಲೆ ಬಾಳುವ ಆಭರಣ ವಶಕ್ಕೆ ಪಡೆದಿದ್ದಾರೆ.</p>.<p>ಬಂಗಾರಪೇಟೆ ನಿವಾಸಿ ರುಕ್ಕಮ್ಮ ಬಂಧಿತ ಮಹಿಳೆ. ಆಕೆಯಿಂದ 43 ಗ್ರಾಂ ತೂಕದ ಚಿನ್ನ ಮತ್ತು 1 ಕೆ.ಜಿ 454 ಗ್ರಾಂ ಬೆಳ್ಳಿ ಆಭರಣವನ್ನು ವಶಕ್ಕೆ ಪಡೆದಿರುವ ಬಂಗಾರಪೇಟೆ ಠಾಣೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.</p>.<p>ಬಂಗಾರಪೇಟೆ ವಾಸಿ ಲಕ್ಷ್ಮಿದೇವಮ್ಮ ಎಂಬುವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಮೂರು ದಿನ ತವರು ಮನೆಗೆ ಹೋಗಿದ್ದರು. ಆಗ ಯಾರೋ ನಕಲಿ ಬೀಗವನ್ನು ಉಪಯೋಗಿಸಿ ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ್ದರು. ಈ ಸಂಬಂಧ ಲಕ್ಷ್ಮಿದೇವಮ್ಮ ದೂರು ನೀಡಿದ್ದರು. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಏ.28 ರಂದು ಕಳ್ಳತನ ಪ್ರಕರಣ ದಾಖಲಾಗಿತ್ತು. ಕೇವಲ ಮೂರು ದಿನಗಳಲ್ಲಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. </p>.<p>ಈ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಮಾಡಲು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಹಾಗೂ ಡಿವೈಎಸ್ಪಿ ಎಸ್.ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆರ್.ದಯಾನಂದ್ ನೇತೃತ್ವದಲ್ಲಿ ಪಿಎಸ್ಐ ಪ್ರಕಾಶ್ ನರಸಿಂಗ್ ಮತ್ತು ತಂಡದವರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.</p>.<p>ಎಸ್.ಪಾಂಡುರಂಗ, ಆರ್.ದಯಾನಂದ್ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬಂಗಾರಪೇಟೆ ಪಿಎಸ್ಐ ಪ್ರಕಾಶ್ ನರಸಿಂಗ್, ಸಿಬ್ಬಂದಿ ನಾಗೇಶ್, ಚಲಪತಿ, ಮಧುಕುಮಾರ್, ಸುನೀಲ್ ಮತ್ತು ಮುನೇಂದ್ರ ಅವರ ಕೆಲಸವನ್ನು ಎಸ್ಪಿ ಶಾಂತರಾಜು ಪ್ರಶಂಶಿಸಿದ್ದಾರೆ.</p>.<blockquote>ಬಂಗಾರಪೇಟೆ ಪೊಲೀಸರ ಕಾರ್ಯಾಚರಣೆ 43 ಗ್ರಾಂ ತೂಕದ ಚಿನ್ನ, 1 ಕೆ.ಜಿ 454 ಗ್ರಾಂ ಬೆಳ್ಳಿ ಆಭರಣ ವಶ ಕಾರ್ಯಾಚರಣೆ ಕೈಗೊಂಡ ಸಿಬ್ಬಂದಿಗೆ ಎಸ್ಪಿ ಶಾಂತರಾಜು ಶ್ಲಾಘನೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಬಂಗಾರಪೇಟೆಯಲ್ಲಿ ಬಂಗಾರ ಮತ್ತು ಬೆಳ್ಳಿ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆರೋಪಿಯನ್ನು ಬಂಧಿಸಿರುವ ಪೊಲೀಸರು ಸುಮಾರು ₹ 4.17 ಲಕ್ಷ ಬೆಲೆ ಬಾಳುವ ಆಭರಣ ವಶಕ್ಕೆ ಪಡೆದಿದ್ದಾರೆ.</p>.<p>ಬಂಗಾರಪೇಟೆ ನಿವಾಸಿ ರುಕ್ಕಮ್ಮ ಬಂಧಿತ ಮಹಿಳೆ. ಆಕೆಯಿಂದ 43 ಗ್ರಾಂ ತೂಕದ ಚಿನ್ನ ಮತ್ತು 1 ಕೆ.ಜಿ 454 ಗ್ರಾಂ ಬೆಳ್ಳಿ ಆಭರಣವನ್ನು ವಶಕ್ಕೆ ಪಡೆದಿರುವ ಬಂಗಾರಪೇಟೆ ಠಾಣೆ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.</p>.<p>ಬಂಗಾರಪೇಟೆ ವಾಸಿ ಲಕ್ಷ್ಮಿದೇವಮ್ಮ ಎಂಬುವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಮೂರು ದಿನ ತವರು ಮನೆಗೆ ಹೋಗಿದ್ದರು. ಆಗ ಯಾರೋ ನಕಲಿ ಬೀಗವನ್ನು ಉಪಯೋಗಿಸಿ ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ್ದರು. ಈ ಸಂಬಂಧ ಲಕ್ಷ್ಮಿದೇವಮ್ಮ ದೂರು ನೀಡಿದ್ದರು. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಏ.28 ರಂದು ಕಳ್ಳತನ ಪ್ರಕರಣ ದಾಖಲಾಗಿತ್ತು. ಕೇವಲ ಮೂರು ದಿನಗಳಲ್ಲಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. </p>.<p>ಈ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಮಾಡಲು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಹಾಗೂ ಡಿವೈಎಸ್ಪಿ ಎಸ್.ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆರ್.ದಯಾನಂದ್ ನೇತೃತ್ವದಲ್ಲಿ ಪಿಎಸ್ಐ ಪ್ರಕಾಶ್ ನರಸಿಂಗ್ ಮತ್ತು ತಂಡದವರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.</p>.<p>ಎಸ್.ಪಾಂಡುರಂಗ, ಆರ್.ದಯಾನಂದ್ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬಂಗಾರಪೇಟೆ ಪಿಎಸ್ಐ ಪ್ರಕಾಶ್ ನರಸಿಂಗ್, ಸಿಬ್ಬಂದಿ ನಾಗೇಶ್, ಚಲಪತಿ, ಮಧುಕುಮಾರ್, ಸುನೀಲ್ ಮತ್ತು ಮುನೇಂದ್ರ ಅವರ ಕೆಲಸವನ್ನು ಎಸ್ಪಿ ಶಾಂತರಾಜು ಪ್ರಶಂಶಿಸಿದ್ದಾರೆ.</p>.<blockquote>ಬಂಗಾರಪೇಟೆ ಪೊಲೀಸರ ಕಾರ್ಯಾಚರಣೆ 43 ಗ್ರಾಂ ತೂಕದ ಚಿನ್ನ, 1 ಕೆ.ಜಿ 454 ಗ್ರಾಂ ಬೆಳ್ಳಿ ಆಭರಣ ವಶ ಕಾರ್ಯಾಚರಣೆ ಕೈಗೊಂಡ ಸಿಬ್ಬಂದಿಗೆ ಎಸ್ಪಿ ಶಾಂತರಾಜು ಶ್ಲಾಘನೆ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>