ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಮಂಗಸಂದ್ರದಲ್ಲಿ ಯುವಕ ಆತ್ಮಹತ್ಯೆ

Last Updated 12 ಜೂನ್ 2020, 16:34 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಮಂಗಸಂದ್ರ ಗ್ರಾಮದಲ್ಲಿ ಗುರುವಾರ ರಾತ್ರಿ ವಿ.ಸತೀಶ್‌ (28) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪದವೀಧರರಾದ ಇವರು ನಗರದ ಟಮಕದಲ್ಲಿನ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಜೂನ್‌ 17ಕ್ಕೆ ಇವರ ಮದುವೆ ನಿಶ್ಚಯವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಸಂಜೆ ಮನೆಯಿಂದ ಹೊರ ಬಂದಿದ್ದ ಸತೀಶ್‌ ಮನೆಗೆ ವಾಪಸ್‌ ಹೋಗಿರಲಿಲ್ಲ. ಬಳಿಕ ಅವರು ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಗ್ರಾಮಸ್ಥರು ಶುಕ್ರವಾರ ಅವರ ಜಮೀನಿನ ಬಳಿ ಹೋದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಸಹೋದರ ಸತೀಶ್‌ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಕಾರಣಕ್ಕೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತರ ಅಣ್ಣ ಸೀತಪ್ಪ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT