ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಸಿ.ಎನ್.ಮಂಜುನಾಥ್ ಗೆಲುವಿಗೆ ಕ್ಷೇತ್ರದ ಕಾರ್ಯಕರ್ತರು ಬೂತ್ ಮಟ್ಟದ ಉತ್ತಮ ರೀತಿಯ ಕೆಲಸ ಮಾಡಿದ ಪರಿಣಾಮ ವಿಜೇತರಾಗಿದ್ದಾರೆ. ವಿಧಾನಸಭಾ ಚುನಾವಣೆಯ ಸೋಲು ನೋವು ತಂದಿತ್ತು, ಈ ಲೋಕಸಭಾ ಚುನಾವಣೆಯ ಗೆಲುವು ಸಂತಸ ತಂದಿದೆ. ಇದಕ್ಕೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು.