<p><strong>ವೇಮಗಲ್</strong> (ಕೋಲಾರ): ವೇಮಗಲ್ ಹೋಬಳಿ ಮಾದಿಗ ಸಮುದಾಯದ ಮುಖಂಡರ ತುರ್ತು ಸಭೆಯನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.</p>.<p>‘ಸದಾಶಿವ ಆಯೋಗ ವರದಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅನುಷ್ಠಾನಕ್ಕೆ ಆಗ್ರಹಿಸಿ ಈಗಾಗಲೇ ಹೈದರಾಬಾದ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಾರಿ ಸಂಬಂಧ ಪ್ರಧಾನಿ ಮೋದಿ ಕೂಡ ಭರವಸೆ ನೀಡಿದ್ದಾರೆ’ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.</p>.<p>‘ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಮಾದಿಗ ಸಮುದಾಯಗಳು ಒಗ್ಗಟ್ಟಾಗಿ ಮುನ್ನಡೆಯಬೇಕಿದೆ’ ಎಂದರು.</p>.<p>ಕೋಲಾರ ಜಿಲ್ಲಾ ಮಾದಿಗ ದಂಡೋರ ಜಿಲ್ಲಾ ಅಧ್ಯಕ್ಷ ಹಾಲೇರಿ ಮುನಿರಾಜು, ಸಾಹುಕಾರ ಶಂಕ್ರಪ್ಪ, ಚನ್ನಸಂದ್ರ ವೆಂಕಟೇಶಪ್ಪ, ಮುನಿರಾಜು, ದಿನ್ನೆಹೊಸಳ್ಳಿ ಅಂಜಿ, ಚೋಳಘಟ್ಟ ಅಶ್ವತ್ಥ್, ಬೆಳ್ಳೂರು ನರಸಿಂಹ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೇಮಗಲ್</strong> (ಕೋಲಾರ): ವೇಮಗಲ್ ಹೋಬಳಿ ಮಾದಿಗ ಸಮುದಾಯದ ಮುಖಂಡರ ತುರ್ತು ಸಭೆಯನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಮಂದಿರದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.</p>.<p>‘ಸದಾಶಿವ ಆಯೋಗ ವರದಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅನುಷ್ಠಾನಕ್ಕೆ ಆಗ್ರಹಿಸಿ ಈಗಾಗಲೇ ಹೈದರಾಬಾದ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಾರಿ ಸಂಬಂಧ ಪ್ರಧಾನಿ ಮೋದಿ ಕೂಡ ಭರವಸೆ ನೀಡಿದ್ದಾರೆ’ ಎಂದು ಸಭೆಯಲ್ಲಿ ಮುಖಂಡರು ತಿಳಿಸಿದರು.</p>.<p>‘ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಮಾದಿಗ ಸಮುದಾಯಗಳು ಒಗ್ಗಟ್ಟಾಗಿ ಮುನ್ನಡೆಯಬೇಕಿದೆ’ ಎಂದರು.</p>.<p>ಕೋಲಾರ ಜಿಲ್ಲಾ ಮಾದಿಗ ದಂಡೋರ ಜಿಲ್ಲಾ ಅಧ್ಯಕ್ಷ ಹಾಲೇರಿ ಮುನಿರಾಜು, ಸಾಹುಕಾರ ಶಂಕ್ರಪ್ಪ, ಚನ್ನಸಂದ್ರ ವೆಂಕಟೇಶಪ್ಪ, ಮುನಿರಾಜು, ದಿನ್ನೆಹೊಸಳ್ಳಿ ಅಂಜಿ, ಚೋಳಘಟ್ಟ ಅಶ್ವತ್ಥ್, ಬೆಳ್ಳೂರು ನರಸಿಂಹ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>