<p><strong>ಮಾಲೂರು</strong>: ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ, ಕಚೇರಿಗಳ ನಾಮ ಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯವಾಗಿ ಕನ್ನಡ ಅಕ್ಷರಗಳನ್ನು ಬಳಸುವಂತೆ ಆದೇಶಿಸಿ ಕಾರ್ಯರೂಪಕ್ಕೆ ತರುವಂತೆ ಒತ್ತಾಯಿಸಿ ಕರ್ನಾಟಕ ಪ್ರಜಾ ವೇದಿಕೆ ಸಂಘಟನೆ ಗುರುವಾರ ಪ್ರತಿಘಟನೆ ನಡೆಸಿತು.</p>.<p>ಸಂಘನೆಯ ರಾಜ್ಯಾಧ್ಯಕ್ಷ ಜಿ. ಮಂಜುನಾಥ ಗೌಡ ನೇತೃತ್ವದಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಜಿ.ಮಂಜುನಾಥ ಗೌಡ ಮಾತನಾಡಿ, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವವರನ್ನು ಕನ್ನಡಿಗರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶ್ಯಸ್ತ. ಅನ್ನ ಕೊಡುವ ಈ ನೆಲದ ನಿಯಮವನ್ನು ಎಲ್ಲರೂ ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಆದ್ದರಿಂದ ಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ತಾಲ್ಲೂಕು ಆಡಳಿತ ಎಲ್ಲಾ ನಾಮ ಫಲಕಗಳಲ್ಲಿ ಶೇ 60ರಷ್ಟು ಕನ್ನಡ ಅಕ್ಷರಗಳನ್ನು ಕಡ್ಡಾಯವಾಗಿ ಬಳಸುವಂತೆ ಆದೇಶಿಸಿ, ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.</p>.<p>ನಂತರ ಗ್ರೇಡ್ 2 ತಹಶೀಲ್ದಾರ್ ಹರಿಪ್ರಸಾದ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ವಸಂತ್ ಅವರಿಗೆ ಮನವಿ ಸಲ್ಲಿಸಿದರು. ಪ್ರಜಾವೇದಿಕೆ ತಾಲ್ಲೂಕು ಅಧ್ಯಕ್ಷ ಪ್ರಸನ್ನಕುಮಾರ್, ಶಿವಾನಂದ, ವೆಂಕಟೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ, ಕಚೇರಿಗಳ ನಾಮ ಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯವಾಗಿ ಕನ್ನಡ ಅಕ್ಷರಗಳನ್ನು ಬಳಸುವಂತೆ ಆದೇಶಿಸಿ ಕಾರ್ಯರೂಪಕ್ಕೆ ತರುವಂತೆ ಒತ್ತಾಯಿಸಿ ಕರ್ನಾಟಕ ಪ್ರಜಾ ವೇದಿಕೆ ಸಂಘಟನೆ ಗುರುವಾರ ಪ್ರತಿಘಟನೆ ನಡೆಸಿತು.</p>.<p>ಸಂಘನೆಯ ರಾಜ್ಯಾಧ್ಯಕ್ಷ ಜಿ. ಮಂಜುನಾಥ ಗೌಡ ನೇತೃತ್ವದಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಜಿ.ಮಂಜುನಾಥ ಗೌಡ ಮಾತನಾಡಿ, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವವರನ್ನು ಕನ್ನಡಿಗರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶ್ಯಸ್ತ. ಅನ್ನ ಕೊಡುವ ಈ ನೆಲದ ನಿಯಮವನ್ನು ಎಲ್ಲರೂ ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಆದ್ದರಿಂದ ಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ತಾಲ್ಲೂಕು ಆಡಳಿತ ಎಲ್ಲಾ ನಾಮ ಫಲಕಗಳಲ್ಲಿ ಶೇ 60ರಷ್ಟು ಕನ್ನಡ ಅಕ್ಷರಗಳನ್ನು ಕಡ್ಡಾಯವಾಗಿ ಬಳಸುವಂತೆ ಆದೇಶಿಸಿ, ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.</p>.<p>ನಂತರ ಗ್ರೇಡ್ 2 ತಹಶೀಲ್ದಾರ್ ಹರಿಪ್ರಸಾದ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ವಸಂತ್ ಅವರಿಗೆ ಮನವಿ ಸಲ್ಲಿಸಿದರು. ಪ್ರಜಾವೇದಿಕೆ ತಾಲ್ಲೂಕು ಅಧ್ಯಕ್ಷ ಪ್ರಸನ್ನಕುಮಾರ್, ಶಿವಾನಂದ, ವೆಂಕಟೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>