ನಗರದ ಬಂಗಾರಪೇಟೆ ವೃತ್ತದಲ್ಲಿ ಬೆಳಿಗ್ಗೆ 10.30ಕ್ಕೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಲಾಗುತ್ತದೆ. ಸಂಸದ ಎಸ್.ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಮಲ್ಲೇಶ್ ಬಾಬು ಈಗಾಗಲೇ ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.