<p><strong>ಮಾಲೂರು:</strong> ಹಾಲು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹3 ಏರಿಕೆ ಮಾಡಿದ್ದು, ಆ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತದೆ ಎಂದು ಕೋಮುಲ್ ಅಧ್ಯಕ್ಷ ಹಾಗೂ ಶಾಸಕ ಕೆ.ವೈ.ನಂಜೇಗೌಡ ಸ್ಪಷ್ಟಪಡಿಸಿದರು<br><br> ಪಟ್ಟಣದ ಕೋಮುಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿದೇಶಗಳಲ್ಲಿ ಹೆಸರು ಮಾಡಿರುವ ನಂದಿನಿ ಹಾಲಿನ ಉತ್ಪಾದನೆ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ. ಈ ಬಾರಿ ಆರು ಲಕ್ಷ ಲೀಟರ್ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಹಾಗಾಗಿ ಹಾಲು ಉತ್ಪಾದನೆ ಹೆಚ್ಚು ಮಾಡುವ ಉದ್ದೇಶದಿಂದ ₹3 ಏರಿಕೆ ಮಾಡಿದ್ದಾರೆ ಎಂದರು.</p>.<p>ಹಾಲನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಒಂದು ಲೀಟರ್ ನಂದಿನಿ ಹಾಲು ₹39ಕ್ಕೆ ಮಾರಾಟವಾಗುತ್ತಿದೆ. ಆದರೆ ಗುಜರಾತ್ ಮೂಲದ ಅಮೂಲ್ ನಂದಿನಿಗಿಂದ ₹10 ಹೆಚ್ಚಿಗೆ ಮಾರಾಟವಾಗುತ್ತಿದೆ. ಶಾಲಾ ಮಕ್ಕಳಿಗೆ ಹಾಲು ವಿತರಣೆ ಹಾಗೂ ಅಂಗನವಾಡಿಯಲ್ಲಿ ಹಾಲಿನ ಪೌಡರ್ ವಿತರಣೆ ಮಾಡುವ ಕಾರ್ಯಕ್ರಮಗಳನ್ನು ಸಿಎಂ ಜಾರಿಗೆ ತಂದ ನಂತರ ಹಾಲಿನ ಸದುಪಯೋಗ ಹೆಚ್ಚಳವಾಯಿತು ಎಂದು ಹೇಳಿದರು.</p>.<p>ಹಾಲಿನ ಬೆಲೆ ಹೆಚ್ಚಳ ಮಾಡಿದ ತಕ್ಷಣ ಪಶು ಆಹಾರದ ಬೆಲೆಯೂ ಹೆಚ್ಚಳವಾಗುತ್ತದೆ. ಇದರಿಂದ ಮತ್ತೆ ಹಾಲು ಉತ್ಪಾದಕರ ಮೇಲೆ ಹೊರೆ ಬೀಳುತ್ತದೆ. ಈ ಬೆಲೆ ನಿಯಂತ್ರಣ ಮಾಡುವುದು ಕೆಎಂಎಫ್. ಹಾಗಾಗಿ ಅದಕ್ಕೆ ಬೆಲೆ ಹೆಚ್ಚಳ ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಹಾಲು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹3 ಏರಿಕೆ ಮಾಡಿದ್ದು, ಆ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತದೆ ಎಂದು ಕೋಮುಲ್ ಅಧ್ಯಕ್ಷ ಹಾಗೂ ಶಾಸಕ ಕೆ.ವೈ.ನಂಜೇಗೌಡ ಸ್ಪಷ್ಟಪಡಿಸಿದರು<br><br> ಪಟ್ಟಣದ ಕೋಮುಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿದೇಶಗಳಲ್ಲಿ ಹೆಸರು ಮಾಡಿರುವ ನಂದಿನಿ ಹಾಲಿನ ಉತ್ಪಾದನೆ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ. ಈ ಬಾರಿ ಆರು ಲಕ್ಷ ಲೀಟರ್ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಹಾಗಾಗಿ ಹಾಲು ಉತ್ಪಾದನೆ ಹೆಚ್ಚು ಮಾಡುವ ಉದ್ದೇಶದಿಂದ ₹3 ಏರಿಕೆ ಮಾಡಿದ್ದಾರೆ ಎಂದರು.</p>.<p>ಹಾಲನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಒಂದು ಲೀಟರ್ ನಂದಿನಿ ಹಾಲು ₹39ಕ್ಕೆ ಮಾರಾಟವಾಗುತ್ತಿದೆ. ಆದರೆ ಗುಜರಾತ್ ಮೂಲದ ಅಮೂಲ್ ನಂದಿನಿಗಿಂದ ₹10 ಹೆಚ್ಚಿಗೆ ಮಾರಾಟವಾಗುತ್ತಿದೆ. ಶಾಲಾ ಮಕ್ಕಳಿಗೆ ಹಾಲು ವಿತರಣೆ ಹಾಗೂ ಅಂಗನವಾಡಿಯಲ್ಲಿ ಹಾಲಿನ ಪೌಡರ್ ವಿತರಣೆ ಮಾಡುವ ಕಾರ್ಯಕ್ರಮಗಳನ್ನು ಸಿಎಂ ಜಾರಿಗೆ ತಂದ ನಂತರ ಹಾಲಿನ ಸದುಪಯೋಗ ಹೆಚ್ಚಳವಾಯಿತು ಎಂದು ಹೇಳಿದರು.</p>.<p>ಹಾಲಿನ ಬೆಲೆ ಹೆಚ್ಚಳ ಮಾಡಿದ ತಕ್ಷಣ ಪಶು ಆಹಾರದ ಬೆಲೆಯೂ ಹೆಚ್ಚಳವಾಗುತ್ತದೆ. ಇದರಿಂದ ಮತ್ತೆ ಹಾಲು ಉತ್ಪಾದಕರ ಮೇಲೆ ಹೊರೆ ಬೀಳುತ್ತದೆ. ಈ ಬೆಲೆ ನಿಯಂತ್ರಣ ಮಾಡುವುದು ಕೆಎಂಎಫ್. ಹಾಗಾಗಿ ಅದಕ್ಕೆ ಬೆಲೆ ಹೆಚ್ಚಳ ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>