ಮಾಲೂರು: ಹಾಲು ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹3 ಏರಿಕೆ ಮಾಡಿದ್ದು, ಆ ಹಣವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತದೆ ಎಂದು ಕೋಮುಲ್ ಅಧ್ಯಕ್ಷ ಹಾಗೂ ಶಾಸಕ ಕೆ.ವೈ.ನಂಜೇಗೌಡ ಸ್ಪಷ್ಟಪಡಿಸಿದರು
ಪಟ್ಟಣದ ಕೋಮುಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿದೇಶಗಳಲ್ಲಿ ಹೆಸರು ಮಾಡಿರುವ ನಂದಿನಿ ಹಾಲಿನ ಉತ್ಪಾದನೆ ರಾಜ್ಯದಲ್ಲಿ ಕಡಿಮೆಯಾಗುತ್ತಿದೆ. ಈ ಬಾರಿ ಆರು ಲಕ್ಷ ಲೀಟರ್ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಹಾಗಾಗಿ ಹಾಲು ಉತ್ಪಾದನೆ ಹೆಚ್ಚು ಮಾಡುವ ಉದ್ದೇಶದಿಂದ ₹3 ಏರಿಕೆ ಮಾಡಿದ್ದಾರೆ ಎಂದರು.