ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಅಧ್ಯಕ್ಷಗಾದಿ ನಿಭಾಯಿಸುವುದಾಗಿ ವರಿಷ್ಠರಿಗೆ ತಿಳಿಸಿದ್ದೇನೆ: ಮುನಿಯಪ್ಪ

Last Updated 16 ಸೆಪ್ಟೆಂಬರ್ 2019, 12:24 IST
ಅಕ್ಷರ ಗಾತ್ರ

ಕೋಲಾರ: ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತು ಕೇಳಿಬರುತ್ತಿದ್ದು, ನನಗೆ ಅಧ್ಯಕ್ಷಗಾದಿ ನೀಡಿದರೆ ನಿಭಾಯಿಸುವುದಾಗಿ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಇಂಗಿತ ವ್ಯಕ್ತಪಡಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿ, ‘ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಎಂದು ಹೇಳುತ್ತಿಲ್ಲ. ವರಿಷ್ಠರು ಅಧ್ಯಕ್ಷರನ್ನು ಬದಲಿಸಲು ಮುಂದಾದರೆ ನನಗೆ ಅವಕಾಶ ನೀಡಿ ಎಂದು ಕೋರಿದ್ದೇನೆ’ ಎಂದು ತಿಳಿಸಿದರು.

‘4 ದಶಕದಿಂದ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ತಾಲ್ಲೂಕು ಮಟ್ಟದಿಂದ ದೆಹಲಿಯ ಪ್ರಮುಖ ಹುದ್ದೆವರೆಗೆ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. 7 ಬಾರಿ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ಪಕ್ಷಕ್ಕೆ ದುಡಿದಿದ್ದೇನೆ. ಅನುಭವ ಹಾಗೂ ಆದ್ಯತೆ ಪರಿಗಣಿಸಿ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಲು ನನಗೆ ಅವಕಾಶ ನೀಡುವಂತೆ ವರಿಷ್ಠರಿಗೆ ಕೇಳಿದ್ದೇನೆ’ ಎಂದರು.

ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕೆ.ಆರ್‌.ರಮೇಶ್‌ಕುಮಾರ್‌ರ ಹೆಸರು ಕೇಳಿಬಂದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ‘ವಿರೋಧ ಪಕ್ಷದ ನಾಯಕರನ್ನು ಸೋನಿಯಾ ಗಾಂಧಿ ಆಯ್ಕೆ ಮಾಡುತ್ತಾರೆ. ಪಕ್ಷದ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ’ ಎಂದು ಹೇಳಿದರು.

‘ಕಾಂಗ್ರೆಸ್ ದೊಡ್ಡ ಪಕ್ಷವಾಗಿರುವುದರಿಂದ ಗೊಂದಲ ಸಹಜ. ಸದ್ಯದಲ್ಲೇ ವಿರೋಧ ಪಕ್ಷದ ನಾಯಕನ್ನು ಆಯ್ಕೆ ಮಾಡಲಾಗುತ್ತದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT