‘4 ದಶಕದಿಂದ ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ತಾಲ್ಲೂಕು ಮಟ್ಟದಿಂದ ದೆಹಲಿಯ ಪ್ರಮುಖ ಹುದ್ದೆವರೆಗೆ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. 7 ಬಾರಿ ಲೋಕಸಭಾ ಸದಸ್ಯನಾಗಿ ಮತ್ತು ಕೇಂದ್ರ ಸಚಿವನಾಗಿ ಪಕ್ಷಕ್ಕೆ ದುಡಿದಿದ್ದೇನೆ. ಅನುಭವ ಹಾಗೂ ಆದ್ಯತೆ ಪರಿಗಣಿಸಿ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಲು ನನಗೆ ಅವಕಾಶ ನೀಡುವಂತೆ ವರಿಷ್ಠರಿಗೆ ಕೇಳಿದ್ದೇನೆ’ ಎಂದರು.