<p><strong>ಕೋಲಾರ:</strong> ‘5 ವರ್ಷದ ಕಠಿಣ ಪರಿಶ್ರಮಕ್ಕೆ ಈಗ ಫಲ ಸಿಕ್ಕಿದೆ. ಬಾಲ್ಯದ ಕನಸು ನನಸಾಗಿದೆ’ ಎಂದು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಯಲ್ಲಿ 545ನೇ ರ್ಯಾಂಕ್ ಗಳಿಸಿರುವ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕಪ್ಪಲಮಡಗು ಗ್ರಾಮದ ಕೆ.ಆರ್.ಭರತ್ ‘ಪ್ರಜಾವಾಣಿ’ ಜತೆ ಸಂತಸ ಹಂಚಿಕೊಂಡರು.</p>.<p>ರಘುನಾಥ್ರಾವ್ ಮತ್ತು ವಾಸವಿ ದಂಪತಿಯ ಪುತ್ರ ಭರತ್ ಬಿ.ಇ ಪದವೀಧರರು. 2015ರಿಂದ 4 ಬಾರಿ ಯುಪಿಎಸ್ಸಿ ಪರೀಕ್ಷೆ ಬರೆದಿದ್ದ ಇವರಿಗೆ ಯಶಸ್ಸು ಸಿಕ್ಕಿರಲಿಲ್ಲ. ಇದೀಗ 5ನೇ ಬಾರಿಯ ಪ್ರಯತ್ನದಲ್ಲಿ ಯಶ ಕಂಡಿದ್ದಾರೆ.</p>.<p>‘ಯುಪಿಎಸ್ಸಿ ಪರೀಕ್ಷೆಯಲ್ಲಿ 4 ಬಾರಿ ಯಶಸ್ಸು ಸಿಗದಿದ್ದಾಗ ನಿರಾಶನಾಗದೆ ಪ್ರಯತ್ನ ಮುಂದುವರಿಸಿದೆ. ಜೀವನದಲ್ಲಿ ಸೋಲು ಸಹಜ. ಆದರೆ, ಸೋಲಿಗೆ ಕುಗ್ಗದೆ ಗುರಿ ಸಾಧನೆಯತ್ತ ಗಮನ ಹರಿಸಿದೆ. ಸತತ ಪ್ರಯತ್ನ ಮತ್ತು ಸಾಧಿಸುವ ಛಲವಿದ್ದರೆ ಏನೂ ಬೇಕಾದರೂ ಸಾಧಿಸಬಹುದು’ ಎಂದು ಭರತ್ ತಮ್ಮ ಯಶಸ್ಸಿನ ಗುಟ್ಟು ಬಿಚ್ಚಿಟ್ಟರು.</p>.<p>‘ಬೆಂಗಳೂರಿನ ವಿಜಯನಗರದಲ್ಲಿ ಸ್ನೇಹಿತರ ಜತೆ ಸೇರಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೆ. ದಿನಕ್ಕೆ ಸುಮಾರು 10 ತಾಸು ಓದುತ್ತಿದ್ದೆ. ಪ್ರತಿನಿತ್ಯ ತಪ್ಪದೇ ಪ್ರಜಾವಾಣಿ ಪತ್ರಿಕೆ ಓದುತ್ತಿದ್ದೆ. ಈ ಬಾರಿ ಪರೀಕ್ಷೆ ಚೆನ್ನಾಗಿ ಬರೆದಿದ್ದರಿಂದ ರ್್ಯಾಂಕ್ ನಿರೀಕ್ಷಿಸಿದ್ದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘5 ವರ್ಷದ ಕಠಿಣ ಪರಿಶ್ರಮಕ್ಕೆ ಈಗ ಫಲ ಸಿಕ್ಕಿದೆ. ಬಾಲ್ಯದ ಕನಸು ನನಸಾಗಿದೆ’ ಎಂದು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಯಲ್ಲಿ 545ನೇ ರ್ಯಾಂಕ್ ಗಳಿಸಿರುವ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕಪ್ಪಲಮಡಗು ಗ್ರಾಮದ ಕೆ.ಆರ್.ಭರತ್ ‘ಪ್ರಜಾವಾಣಿ’ ಜತೆ ಸಂತಸ ಹಂಚಿಕೊಂಡರು.</p>.<p>ರಘುನಾಥ್ರಾವ್ ಮತ್ತು ವಾಸವಿ ದಂಪತಿಯ ಪುತ್ರ ಭರತ್ ಬಿ.ಇ ಪದವೀಧರರು. 2015ರಿಂದ 4 ಬಾರಿ ಯುಪಿಎಸ್ಸಿ ಪರೀಕ್ಷೆ ಬರೆದಿದ್ದ ಇವರಿಗೆ ಯಶಸ್ಸು ಸಿಕ್ಕಿರಲಿಲ್ಲ. ಇದೀಗ 5ನೇ ಬಾರಿಯ ಪ್ರಯತ್ನದಲ್ಲಿ ಯಶ ಕಂಡಿದ್ದಾರೆ.</p>.<p>‘ಯುಪಿಎಸ್ಸಿ ಪರೀಕ್ಷೆಯಲ್ಲಿ 4 ಬಾರಿ ಯಶಸ್ಸು ಸಿಗದಿದ್ದಾಗ ನಿರಾಶನಾಗದೆ ಪ್ರಯತ್ನ ಮುಂದುವರಿಸಿದೆ. ಜೀವನದಲ್ಲಿ ಸೋಲು ಸಹಜ. ಆದರೆ, ಸೋಲಿಗೆ ಕುಗ್ಗದೆ ಗುರಿ ಸಾಧನೆಯತ್ತ ಗಮನ ಹರಿಸಿದೆ. ಸತತ ಪ್ರಯತ್ನ ಮತ್ತು ಸಾಧಿಸುವ ಛಲವಿದ್ದರೆ ಏನೂ ಬೇಕಾದರೂ ಸಾಧಿಸಬಹುದು’ ಎಂದು ಭರತ್ ತಮ್ಮ ಯಶಸ್ಸಿನ ಗುಟ್ಟು ಬಿಚ್ಚಿಟ್ಟರು.</p>.<p>‘ಬೆಂಗಳೂರಿನ ವಿಜಯನಗರದಲ್ಲಿ ಸ್ನೇಹಿತರ ಜತೆ ಸೇರಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದೆ. ದಿನಕ್ಕೆ ಸುಮಾರು 10 ತಾಸು ಓದುತ್ತಿದ್ದೆ. ಪ್ರತಿನಿತ್ಯ ತಪ್ಪದೇ ಪ್ರಜಾವಾಣಿ ಪತ್ರಿಕೆ ಓದುತ್ತಿದ್ದೆ. ಈ ಬಾರಿ ಪರೀಕ್ಷೆ ಚೆನ್ನಾಗಿ ಬರೆದಿದ್ದರಿಂದ ರ್್ಯಾಂಕ್ ನಿರೀಕ್ಷಿಸಿದ್ದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>