ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯ ಮಟ್ಟದ ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿದ್ದ ವಿಶ್ವನಾಥ್ ಅವರನ್ನು ಬಿಜೆಪಿ ಮುಖಂಡರು ಆಪರೇಷನ್ ಕಮಲದ ಹೆಸರಿನಲ್ಲಿ ಎಲ್ಲಿಯೂ ಸಲ್ಲದಂತೆ ಮಾಡಿದ್ದಾರೆ. ಬಿಜೆಪಿ ನಂಬಿ ಹೋದರೆ ರಾಜಕೀಯವಾಗಿ ಅತಂತ್ರರಾಗುತ್ತಾರೆ ಎಂಬುದಕ್ಕೆ ವಿಶ್ವನಾಥ್ ಅವರು ತಾಜಾ ಉದಾಹರಣೆ’ ಎಂದು ಟೀಕಿಸಿದರು.