<p><strong>ಕೋಲಾರ:</strong> ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಕೊರೊನಾ ಸೋಂಕಿನ ಕಾರಣಕ್ಕೆ ಮನೆಗಳಲ್ಲೇ ಪೋಷಕರು ಮಕ್ಕಳಿಗೆ ಕೃಷ್ಣ, ರುಕ್ಮಿಣಿ ಹಾಗೂ ರಾಧೆಯ ವೇಷಭೂಷಣ ಮಾಡಿ ಸಂಭ್ರಮಿಸಿದರು. ಕೃಷ್ಣ ಹಾಗೂ ರಾಧೆ ವೇಷಧಾರಿಗಳಾಗಿದ್ದ ಪುಟಾಣಿಗಳ ಕಲರವದಿಂದ ಮನೆಗಳು ನಂದಗೋಕುಲದಂತಾದವು.</p>.<p>ಕಿಲಾರಿಪೇಟೆಯ ಶ್ರೀ ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ 60ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಇಡೀ ದೇವಾಲಯಕ್ಕೆ ಪುಷ್ಪಾಲಂಕಾರ ಮಾಡಲಾಗಿತ್ತು. ದೇವರಿಗೆ ಬೆಳಿಗ್ಗೆ ವಿಶೇಷ ಅಭಿಷೇಕ ನಡೆಯಿತು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಜನಸಂದಣಿಗೆ ಅವಕಾಶ ನೀಡದಿದ್ದರೂ, ಶ್ರದ್ಧಾ ಭಕ್ತಿಯ ವೈಭವದ ಪೂಜೆಗೆ ಅಡ್ಡಿಯಿರಲಿಲ್ಲ. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಇದರಿಂದ ಯಾದವ ಸಮುದಾಯದ ಮುಖಂಡರು ಸಂತಸಗೊಂಡರು.</p>.<p>ಕಲ್ಯಾಣೋತ್ಸವ: ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ 3 ದಿನಗಳಿಂದ ಮುತ್ತೈದೆಯರಿಗೆ ಬಳೆ ತೊಡಿಸುವುದು, ದೀಪೋತ್ಸವ ಸೇವೆ ಸೇರಿದಂತೆ ವಿವಿಧ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಕಿಲಾರಿಪೇಟೆ ಭಕ್ತರು ಮಂಗಳವಾರ ದೇವಾಲಯದೊಳಗೆ ಮಂಗಳವಾದ್ಯ, ಮೇಳದೊಂದಿಗೆ ಕಲ್ಯಾಣೋತ್ಸವ ನಡೆಸಿದರು.</p>.<p>ನೂರಾರು ಭಕ್ತರು ದೇವರ ದರ್ಶನ ಪಡೆದರು. ದೇವರ ಪುಷ್ಪಪಲ್ಲಕ್ಕಿ ಮೆರವಣಿಗೆ ಮತ್ತು ಪ್ರಾಕಾರೋತ್ಸವ ದೇವಾಲಯ ಪ್ರಾಂಗಣದಲ್ಲಿ ಸಾಗಿಬಂದು ಮನಸೂರೆಗೊಂಡಿತು. ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋವಿಡ್–19 ಆತಂಕದ ಹಿನ್ನೆಲೆಯಲ್ಲಿ ನಗರದಲ್ಲಿ ಮಂಗಳವಾರ ಕೃಷ್ಣ ಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಕೊರೊನಾ ಸೋಂಕಿನ ಕಾರಣಕ್ಕೆ ಮನೆಗಳಲ್ಲೇ ಪೋಷಕರು ಮಕ್ಕಳಿಗೆ ಕೃಷ್ಣ, ರುಕ್ಮಿಣಿ ಹಾಗೂ ರಾಧೆಯ ವೇಷಭೂಷಣ ಮಾಡಿ ಸಂಭ್ರಮಿಸಿದರು. ಕೃಷ್ಣ ಹಾಗೂ ರಾಧೆ ವೇಷಧಾರಿಗಳಾಗಿದ್ದ ಪುಟಾಣಿಗಳ ಕಲರವದಿಂದ ಮನೆಗಳು ನಂದಗೋಕುಲದಂತಾದವು.</p>.<p>ಕಿಲಾರಿಪೇಟೆಯ ಶ್ರೀ ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ 60ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಇಡೀ ದೇವಾಲಯಕ್ಕೆ ಪುಷ್ಪಾಲಂಕಾರ ಮಾಡಲಾಗಿತ್ತು. ದೇವರಿಗೆ ಬೆಳಿಗ್ಗೆ ವಿಶೇಷ ಅಭಿಷೇಕ ನಡೆಯಿತು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಜನಸಂದಣಿಗೆ ಅವಕಾಶ ನೀಡದಿದ್ದರೂ, ಶ್ರದ್ಧಾ ಭಕ್ತಿಯ ವೈಭವದ ಪೂಜೆಗೆ ಅಡ್ಡಿಯಿರಲಿಲ್ಲ. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದರು. ಇದರಿಂದ ಯಾದವ ಸಮುದಾಯದ ಮುಖಂಡರು ಸಂತಸಗೊಂಡರು.</p>.<p>ಕಲ್ಯಾಣೋತ್ಸವ: ರುಕ್ಮಿಣಿ ಸತ್ಯಭಾಮ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ 3 ದಿನಗಳಿಂದ ಮುತ್ತೈದೆಯರಿಗೆ ಬಳೆ ತೊಡಿಸುವುದು, ದೀಪೋತ್ಸವ ಸೇವೆ ಸೇರಿದಂತೆ ವಿವಿಧ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು. ಕಿಲಾರಿಪೇಟೆ ಭಕ್ತರು ಮಂಗಳವಾರ ದೇವಾಲಯದೊಳಗೆ ಮಂಗಳವಾದ್ಯ, ಮೇಳದೊಂದಿಗೆ ಕಲ್ಯಾಣೋತ್ಸವ ನಡೆಸಿದರು.</p>.<p>ನೂರಾರು ಭಕ್ತರು ದೇವರ ದರ್ಶನ ಪಡೆದರು. ದೇವರ ಪುಷ್ಪಪಲ್ಲಕ್ಕಿ ಮೆರವಣಿಗೆ ಮತ್ತು ಪ್ರಾಕಾರೋತ್ಸವ ದೇವಾಲಯ ಪ್ರಾಂಗಣದಲ್ಲಿ ಸಾಗಿಬಂದು ಮನಸೂರೆಗೊಂಡಿತು. ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>