ಬೆಂಗಳೂರಿನಿಂದ ಆಂಧ್ರಪ್ರದೇಶದ ವಿಜಯವಾಡಕ್ಕೆ ಹೋಗುತ್ತಿದ್ದ ಬಸ್ ಮೇಲೆ ದುಷ್ಕರ್ಮಿಗಳು ಜಿಲ್ಲಾ ಕೇಂದ್ರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ತಂಬಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ಕಲ್ಲು ತೂರಿ ಪರಾರಿಯಾಗಿದ್ದಾರೆ.ಕೋಲಾರದಿಂದ ಮಾಲೂರಿಗೆ ಹೋಗುತ್ತಿದ್ದ ಬಸ್ನ ಮೇಲೆ ಚಲುವನಹಳ್ಳಿ ಗೇಟ್ ಬಳಿ ಗುರುವಾರ ಮಧ್ಯಾಹ್ನ ಕಲ್ಲು ತೂರಲಾಗಿದೆ. ಕಿಡಿಗೇಡಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬೈಕ್ನಲ್ಲಿ ಬಂದು ಈ ದುಷ್ಕೃತ್ಯ ಎಸಗಿದ್ದಾರೆ.