<p>ಮುಳಬಾಗಿಲು: ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಕುಮುದೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ಸಸಿ ನೆಡುವ ಮೂಲಕ ವಿಶ್ವ ಭೂಮಿ ದಿನಾಚರಣೆಯನ್ನು ಆಚರಿಸಲಾಯಿತು.</p>.<p>ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ್ ಗೌಡ ರುಧ್ರೆ ಮಾತನಾಡಿ, ಇತ್ತೀಚೆಗೆ ಭೂಮಿಗೆ ರಾಸಾಯನಿಕ ಗೊಬ್ಬರ, ಔಷಧ ಹಾಗೂ ಪ್ಲಾಸ್ಟಿಕ್ ಮಿಶ್ರಣವಾಗುತ್ತಿರುವುದರಿಂದ ಭೂಮಿ ವಿಷಕಾರಿಯಾಗಿ ಬದಲಾಗುತ್ತಿದೆ. ಇಂತಹ ಸಂಧರ್ಭದಲ್ಲಿ ಎಲ್ಲರೂ ಭೂಮಿಯನ್ನು ಕಾಪಾಡಲು ಮುಂದಾಗಬೇಕೆಂದು ತಿಳಿಸಿದರು.</p>.<p>ಆಧುನಿಕತೆಯ ಹೆಸರಿನಲ್ಲಿ ಕಾರ್ಖಾನೆಗಳು ಬಿಡುವ ನಾನಾ ವಿಧದ ತ್ಯಾಜ್ಯ, ನಾಶವಾಗದ ಪ್ಲಾಸ್ಟಿಕ್ ತ್ಯಾಜ್ಯ ಮಿಶ್ರಣವಾಗುವುದರಿಂದ ಭೂಮಿ ವಿಷಕಾರಿಯಾಗುತ್ತಿದೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ಬಳಸುವ ರಾಸಾಯನಿಕ ಗೊಬ್ಬರಗಳಿಂದ ಹಾಗೂ ವಿಷಕಾರಿ ಔಷಧ ಸಿಂಪಡಣೆಯಿಂದ ಭೂಮಿ ಸಂಪೂರ್ಣ ನಾಶದತ್ತ ಸಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಸರ್ಕಾರಿ ವಕೀಲ ನಂಗಲಿ ಆರ್.ನಾಗರಾಜ್ ಮಾತನಾಡಿ, ಯುವಕರು ಮೊಬೈಲುಗಳಲ್ಲಿ ಕಾಲ ಕಳೆಯುತ್ತಾ ಸಮಾಜ ನಿರ್ಮಾಣ ಕಾರ್ಯದಲ್ಲಿ ಹಿಂದೆ ಬಿದ್ದಿದ್ದಾರೆ. ಹಾಗಾಗಿ ಯುವಕರು ಭೂಮಿಯ ಶುದ್ಧತೆ, ಪರಿಸರ ನಿರ್ಮಾಣ ಹಾಗೂ ಭೂಮಿಗೆ ವಿಷಕಾರಿ ವಸ್ತುಗಳನ್ನು ಸೇರಿಸದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.</p>.<p>ಇತ್ತೀಚೆಗೆ ಜಾಗತೀಕರಣದ ಹೆಸರಿನಲ್ಲಿ ಪರಿಸರದ ಹಾಗೂ ಮರಗಳ ಮಾರಣ ಹೋಮ ನಡೆಯುತ್ತಿದೆ. ಹಾಗಾಗಿ ಎಲ್ಲರೂ ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಪುನರ್ ಸೃಷ್ಟಿ ಮಾಡುವ ಕೆಲಸ ಮಾಡಬೇಕೆಂದು ಕರೆ ನೀಡಿದರು.</p>.<p>ಅಪರ ಸಿವಿಲ್ ನ್ಯಾಯಾಧೀಶೆ ರೋಹಿಣಿ, ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿ ಶಾಲಿನಿ, ವಕೀಲರ ಸಂಘದ ಅಧ್ಯಕ್ಷ ಸತೀಶ್ ಕುಮಾರ್, ಶ್ರೀನಿವಾಸ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1872543599</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಕುಮುದೇನಹಳ್ಳಿ ಅರಣ್ಯ ಪ್ರದೇಶದಲ್ಲಿ ಬುಧವಾರ ಸಸಿ ನೆಡುವ ಮೂಲಕ ವಿಶ್ವ ಭೂಮಿ ದಿನಾಚರಣೆಯನ್ನು ಆಚರಿಸಲಾಯಿತು.</p>.<p>ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ್ ಗೌಡ ರುಧ್ರೆ ಮಾತನಾಡಿ, ಇತ್ತೀಚೆಗೆ ಭೂಮಿಗೆ ರಾಸಾಯನಿಕ ಗೊಬ್ಬರ, ಔಷಧ ಹಾಗೂ ಪ್ಲಾಸ್ಟಿಕ್ ಮಿಶ್ರಣವಾಗುತ್ತಿರುವುದರಿಂದ ಭೂಮಿ ವಿಷಕಾರಿಯಾಗಿ ಬದಲಾಗುತ್ತಿದೆ. ಇಂತಹ ಸಂಧರ್ಭದಲ್ಲಿ ಎಲ್ಲರೂ ಭೂಮಿಯನ್ನು ಕಾಪಾಡಲು ಮುಂದಾಗಬೇಕೆಂದು ತಿಳಿಸಿದರು.</p>.<p>ಆಧುನಿಕತೆಯ ಹೆಸರಿನಲ್ಲಿ ಕಾರ್ಖಾನೆಗಳು ಬಿಡುವ ನಾನಾ ವಿಧದ ತ್ಯಾಜ್ಯ, ನಾಶವಾಗದ ಪ್ಲಾಸ್ಟಿಕ್ ತ್ಯಾಜ್ಯ ಮಿಶ್ರಣವಾಗುವುದರಿಂದ ಭೂಮಿ ವಿಷಕಾರಿಯಾಗುತ್ತಿದೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ಬಳಸುವ ರಾಸಾಯನಿಕ ಗೊಬ್ಬರಗಳಿಂದ ಹಾಗೂ ವಿಷಕಾರಿ ಔಷಧ ಸಿಂಪಡಣೆಯಿಂದ ಭೂಮಿ ಸಂಪೂರ್ಣ ನಾಶದತ್ತ ಸಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಸರ್ಕಾರಿ ವಕೀಲ ನಂಗಲಿ ಆರ್.ನಾಗರಾಜ್ ಮಾತನಾಡಿ, ಯುವಕರು ಮೊಬೈಲುಗಳಲ್ಲಿ ಕಾಲ ಕಳೆಯುತ್ತಾ ಸಮಾಜ ನಿರ್ಮಾಣ ಕಾರ್ಯದಲ್ಲಿ ಹಿಂದೆ ಬಿದ್ದಿದ್ದಾರೆ. ಹಾಗಾಗಿ ಯುವಕರು ಭೂಮಿಯ ಶುದ್ಧತೆ, ಪರಿಸರ ನಿರ್ಮಾಣ ಹಾಗೂ ಭೂಮಿಗೆ ವಿಷಕಾರಿ ವಸ್ತುಗಳನ್ನು ಸೇರಿಸದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.</p>.<p>ಇತ್ತೀಚೆಗೆ ಜಾಗತೀಕರಣದ ಹೆಸರಿನಲ್ಲಿ ಪರಿಸರದ ಹಾಗೂ ಮರಗಳ ಮಾರಣ ಹೋಮ ನಡೆಯುತ್ತಿದೆ. ಹಾಗಾಗಿ ಎಲ್ಲರೂ ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಪುನರ್ ಸೃಷ್ಟಿ ಮಾಡುವ ಕೆಲಸ ಮಾಡಬೇಕೆಂದು ಕರೆ ನೀಡಿದರು.</p>.<p>ಅಪರ ಸಿವಿಲ್ ನ್ಯಾಯಾಧೀಶೆ ರೋಹಿಣಿ, ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿ ಶಾಲಿನಿ, ವಕೀಲರ ಸಂಘದ ಅಧ್ಯಕ್ಷ ಸತೀಶ್ ಕುಮಾರ್, ಶ್ರೀನಿವಾಸ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-18-1872543599</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>