ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಗೋಪಾಲಗೌಡ ಮಾತನಾಡಿ, ಕುವೆಂಪು ಅವರ ಆದರ್ಶಗಳು ಸಮಾಜಕ್ಕೆ ದಿಕ್ಸೂಚಿ ಇದ್ದಂತೆ. ಅವರ ಬದುಕಿನ ವೈಚಾರಿಕತೆ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬಹುದು ಎಂದು ಹೇಳಿದರು.
ವಕೀಲ ಎಂ.ಎಸ್ ಶ್ರೀನಿವಾಸರೆಡ್ಡಿ ಮಾತನಾಡಿ, ಕುವೆಂಪು ಸಾಹಿತ್ಯಲೋಕದ ದಿಗ್ಗಜರಲ್ಲಿ ಒಬ್ಬರು. ಅವರ ಬರಹಗಳು, ಸಂದೇಶಗಳು ಮತ್ತು ನಾಗರಿಕ ಸಮಾಜಕ್ಕೆ ಅವರು ಕೊಟ್ಟ ಕೊಡುಗೆಗಳು ಸ್ಮರಣೀಯ. ಬರಹಗಳ ಮೂಲಕ ಸಮಾಜಕ್ಕೆ ಒಂದು ಮೌಲ್ಯಾಧಾರಿತ ಮತ್ತು ಗುಣಾತ್ಮಕ ಸಂದೇಶಗಳನ್ನು ನೀಡಿರುವ ಒಬ್ಬ ಮಹಾನ್ ಚೇತನ ಕುವೆಂಪು ನಮ್ಮನ್ನು ಅಗಲಿ ಹಲವು ವರ್ಷಗಳಾದರೂ ಅವರ ಸಂದೇಶಗಳು ಆಧುನಿಕ ಸಮಾಜಕ್ಕೆ ಮಾದರಿಯಾಗಿದೆ ಎಂದರು.