ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಪರಿಶಿಷ್ಟ ಜಾತಿ ಬಾಲಕನ ನಿವಾಸಕ್ಕೆ ಶಾಸಕ ನಂಜೇಗೌಡ ಭೇಟಿ ನೀಡಿ, ಊಟ

Last Updated 22 ಸೆಪ್ಟೆಂಬರ್ 2022, 9:37 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಯ ಬಾಲಕನ ನಿವಾಸಕ್ಕೆ ಮಾಲೂರುಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಗುರುವಾರ ಭೇಟಿ ಆರ್ಥಿಕ ನೆರವಿನ ಭರವಸೆ ನೀಡಿದರು.

ಅವರ ನಿವಾಸದಲ್ಲಿ ಊಟ ಮಾಡಿ ಬಾಲಕನ ತಾಯಿ ಶೋಭಾ ಅವರಿಗೆ ಧೈರ್ಯ ತುಂಬಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಗ್ರಾಮಕ್ಕೆ ಹತ್ತಿರದಲ್ಲೇ ಇರುವ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಕೂಡ ಈ ಸಂದರ್ಭದಲ್ಲಿ ಇದ್ದರು.

ಈ ನಡುವೆ, ಗ್ರಾಮದೊಳಗೆ ಕುಟುಂಬಕ್ಕೆ ನಿವೇಶನ ಗುರುತಿಸಿದ್ದು, ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಿ ನೇತೃತ್ವದಲ್ಲಿ ಶಾಂತಿ ಸಭೆ ಕೂಡ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT