ಮಳೆ ಬಂದರೆ ಸಂತೆ ಮೈದಾನದಲ್ಲಿರುವ ಹಳ್ಳಕೊಳ್ಳಗಳಲ್ಲಿ ನೀರು ತುಂಬಿಕೊಂಡು ರಸ್ತೆಗಳು ಹದಗೆಡುತ್ತವೆ. ತರಕಾರಿ ಖರೀದಿಸಲು ಹೆಚ್ಚಾಗಿ ಮಹಿಳೆಯರು, ಮಕ್ಕಳು ಕೊಚ್ಚೆಯಲ್ಲಿ ಬಿದ್ದು ಎದ್ದು ಬರಬೇಕು. ಅಲ್ಲದೇ, ಕುಡಿಯುವ ನೀರು ಮತ್ತು ಶೌಚಾಲಯ ಸೌಕರ್ಯ ಇಲ್ಲದೆ ಬಹಳ ತೊಂದರೆಯಾಗಿದೆ. ಸಂಬಂಧಪಟ್ಟ ಇಲಾಖೆ ಕೂಡಲೇ ಗಮನವಹಿಸಿ ಸ್ವಚ್ಛತೆಯ ಜತೆಗೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ತರಕಾರಿ ವ್ಯಾಪಾರಿ ಮಂಜುನಾಥ್ ಒತ್ತಾಯಿಸುತ್ತಾರೆ.