<p><strong>ಕೋಲಾರ:</strong> ತಾಲ್ಲೂಕಿನ ಮುದುವಾಡಿ ಕೆರೆ ಕೋಲಾರ ಜಿಲ್ಲೆಯಲ್ಲಿ ದೊಡ್ಡ ಕೆರೆಗಳಲ್ಲಿ ಒಂದಾಗಿದ್ದು, ರಸ್ತೆಯ ಬದಿಯಲ್ಲಿ ತಡೆಗೋಡೆಯೇ ಇಲ್ಲ. ಈ ಹಿಂದೆಯೂ ಅವಘಡಗಳು ಸಂಭವಿಸಿದ್ದು, ಹಲವಾರು ಬಾರಿ ಮನವಿ ನೀಡಿದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೋಲಾರ ಮತ್ತು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ಆಂಧ್ರದ ಮದನಪಲ್ಲಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ. ನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ.</p>.<p>ಲೋಕೋಪಯೋಗಿ ಇಲಾಖೆ ಹಾಗೂ ಕೆರೆ ನಿರ್ವಹಣೆ ಮಾಡುವ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯದಿಂದ ಮುದುವಾಡಿ ಕೆರೆ ಪಕ್ಕದ ರಸ್ತೆಗೆ ತಡೆಗೋಡೆ ಇಲ್ಲವಾಗಿದೆ. ಈಗ ಮತ್ತೊಂದು ಘೋರ ದುರಂತ ಸಂಭವಿಸಲು ಈ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. </p>.<p>ಇನ್ನಾದರೂ ಎಚ್ಚೆತ್ತುಕೊಂಡು ತಡೆಗೋಡೆ ನಿರ್ಮಾಣ ಮಾಡುವ ಜೊತೆಗೆ ರಸ್ತೆ ವಿಸ್ತರಿಸುವ ಕೆಲಸ ಮಾಡಬೇಕಿದೆ ಎಂದು ತೊಟ್ಲಿ ಗ್ರಾಮದ ನಿವಾಸಿ ಟಿ.ವಿ.ರಮೇಶ್ ಆಗ್ರಹಿಸಿದ್ದಾರೆ.</p>.<p>ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಕೂಡ ಭೇಟಿ ನೀಡಿ ಮೇಲ್ಸೇತುವೆ ಹಾಗೂ ತಡೆಗೋಡೆ ನಿರ್ಮಿಸುವ ಭರವಸೆ ನೀಡಿದ್ದರು. ಸಂಸದರು, ಶಾಸಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ಮುದುವಾಡಿ ಕೆರೆ ಕೋಲಾರ ಜಿಲ್ಲೆಯಲ್ಲಿ ದೊಡ್ಡ ಕೆರೆಗಳಲ್ಲಿ ಒಂದಾಗಿದ್ದು, ರಸ್ತೆಯ ಬದಿಯಲ್ಲಿ ತಡೆಗೋಡೆಯೇ ಇಲ್ಲ. ಈ ಹಿಂದೆಯೂ ಅವಘಡಗಳು ಸಂಭವಿಸಿದ್ದು, ಹಲವಾರು ಬಾರಿ ಮನವಿ ನೀಡಿದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೋಲಾರ ಮತ್ತು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದೆ. ಆಂಧ್ರದ ಮದನಪಲ್ಲಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಕೂಡ. ನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ.</p>.<p>ಲೋಕೋಪಯೋಗಿ ಇಲಾಖೆ ಹಾಗೂ ಕೆರೆ ನಿರ್ವಹಣೆ ಮಾಡುವ ಸಣ್ಣ ನೀರಾವರಿ ಇಲಾಖೆ ನಿರ್ಲಕ್ಷ್ಯದಿಂದ ಮುದುವಾಡಿ ಕೆರೆ ಪಕ್ಕದ ರಸ್ತೆಗೆ ತಡೆಗೋಡೆ ಇಲ್ಲವಾಗಿದೆ. ಈಗ ಮತ್ತೊಂದು ಘೋರ ದುರಂತ ಸಂಭವಿಸಲು ಈ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. </p>.<p>ಇನ್ನಾದರೂ ಎಚ್ಚೆತ್ತುಕೊಂಡು ತಡೆಗೋಡೆ ನಿರ್ಮಾಣ ಮಾಡುವ ಜೊತೆಗೆ ರಸ್ತೆ ವಿಸ್ತರಿಸುವ ಕೆಲಸ ಮಾಡಬೇಕಿದೆ ಎಂದು ತೊಟ್ಲಿ ಗ್ರಾಮದ ನಿವಾಸಿ ಟಿ.ವಿ.ರಮೇಶ್ ಆಗ್ರಹಿಸಿದ್ದಾರೆ.</p>.<p>ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಕೂಡ ಭೇಟಿ ನೀಡಿ ಮೇಲ್ಸೇತುವೆ ಹಾಗೂ ತಡೆಗೋಡೆ ನಿರ್ಮಿಸುವ ಭರವಸೆ ನೀಡಿದ್ದರು. ಸಂಸದರು, ಶಾಸಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>