‘ಕನ್ನಡ ಸಾಹಿತ್ಯ ಲೋಕದಲ್ಲಿ ಎನ್ಎಸ್ಎಲ್ ಎಂದೇ ಮನೆ ಮಾತಾಗಿದ್ದಭಟ್ಟರು ಕಲೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳ ಗೀತೆ ರಚನೆ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ಅಲ್ಲದೇ, ಸಂಸ್ಕೃತ ಮತ್ತು ಇಂಗ್ಲೀಷ್ ಭಾಷೆಯಲ್ಲೂ ಕೃತಿ ರಚನೆ ಮಾಡಿದ್ದಾರೆ’ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ನಾರಾಯಣಪ್ಪ ಹೇಳಿದರು.