<p><strong>ಕೋಲಾರ: </strong>ತಾಲ್ಲೂಕಿನ ನಾಚಹಳ್ಳಿಯಲ್ಲಿ ಜಮೀನು ವಿವಾದದ ಸಂಬಂಧ ಎರಡು ಕುಟುಂಬಗಳ ನಡುವೆ ಬುಧವಾರ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದಾರೆ.</p>.<p>ನಾಚಹಳ್ಳಿ ಗ್ರಾಮದ ಸರ್ವೆ ನಂಬರ್ 30/5ರಲ್ಲಿರುವ 19 ಗುಂಟೆ ಜಮೀನಿನ ಒಡೆತನದ ವಿಚಾರವಾಗಿ ಆಂಜಿನಪ್ಪ ಮತ್ತು ಸೊಣ್ಣೇಗೌಡ ಎಂಬುವರ ನಡುವೆ ವಿವಾದವಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p>.<p>ಆಂಜಿನಪ್ಪ ಕುಟುಂಬ ಸದಸ್ಯರು ವಿವಾದಿತ ಜಮೀನಿನಲ್ಲಿ ದನಗಳಿಗೆ ನೆರಳಿನ ವ್ಯವಸ್ಥೆಗಾಗಿ ಬೆಳಿಗ್ಗೆ ಚಪ್ಪರ ಹಾಕಲು ಹೋಗಿದ್ದರು. ಇದಕ್ಕೆ ಸೊಣ್ಣೇಗೌಡ ಕುಟುಂಬ ಸದಸ್ಯರು ಅಡ್ಡಿಪಡಿಸಿ ಚಪ್ಪರ ಹಾಕದಂತೆ ತಡೆದಿದ್ದಾರೆ. ಬಳಿಕ ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.</p>.<p>ಇದರಿಂದ ಆಕ್ರೋಶಗೊಂಡ ಆಂಜಿನಪ್ಪ ಕುಟುಂಬದ ಮೈಲಾರಪ್ಪ, ನಾಗರಾಜ್ ಮತ್ತು ಚಿನ್ನಪ್ಪ ಅವರು ಸೊಣ್ಣೇಗೌಡ, ಚೌಡರೆಡ್ಡಿ ಹಾಗೂ ನಾರಾಯಣಸ್ವಾಮಿ ಮೇಲೆ ಕಾರದ ಪುಡಿ ಎರಚಿ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.</p>.<p>ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸೊಣ್ಣೇಗೌಡ, ಚೌಡರೆಡ್ಡಿ ಮತ್ತು ನಾರಾಯಣಸ್ವಾಮಿ ಅವರನ್ನು ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಮಗಲ್ ಠಾಣೆ ಪೊಲೀಸರು ಕೊಲೆ ಯತ್ನ ಹಾಗೂ ಹಲ್ಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ನಾಚಹಳ್ಳಿಯಲ್ಲಿ ಜಮೀನು ವಿವಾದದ ಸಂಬಂಧ ಎರಡು ಕುಟುಂಬಗಳ ನಡುವೆ ಬುಧವಾರ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದಾರೆ.</p>.<p>ನಾಚಹಳ್ಳಿ ಗ್ರಾಮದ ಸರ್ವೆ ನಂಬರ್ 30/5ರಲ್ಲಿರುವ 19 ಗುಂಟೆ ಜಮೀನಿನ ಒಡೆತನದ ವಿಚಾರವಾಗಿ ಆಂಜಿನಪ್ಪ ಮತ್ತು ಸೊಣ್ಣೇಗೌಡ ಎಂಬುವರ ನಡುವೆ ವಿವಾದವಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.</p>.<p>ಆಂಜಿನಪ್ಪ ಕುಟುಂಬ ಸದಸ್ಯರು ವಿವಾದಿತ ಜಮೀನಿನಲ್ಲಿ ದನಗಳಿಗೆ ನೆರಳಿನ ವ್ಯವಸ್ಥೆಗಾಗಿ ಬೆಳಿಗ್ಗೆ ಚಪ್ಪರ ಹಾಕಲು ಹೋಗಿದ್ದರು. ಇದಕ್ಕೆ ಸೊಣ್ಣೇಗೌಡ ಕುಟುಂಬ ಸದಸ್ಯರು ಅಡ್ಡಿಪಡಿಸಿ ಚಪ್ಪರ ಹಾಕದಂತೆ ತಡೆದಿದ್ದಾರೆ. ಬಳಿಕ ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.</p>.<p>ಇದರಿಂದ ಆಕ್ರೋಶಗೊಂಡ ಆಂಜಿನಪ್ಪ ಕುಟುಂಬದ ಮೈಲಾರಪ್ಪ, ನಾಗರಾಜ್ ಮತ್ತು ಚಿನ್ನಪ್ಪ ಅವರು ಸೊಣ್ಣೇಗೌಡ, ಚೌಡರೆಡ್ಡಿ ಹಾಗೂ ನಾರಾಯಣಸ್ವಾಮಿ ಮೇಲೆ ಕಾರದ ಪುಡಿ ಎರಚಿ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ.</p>.<p>ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸೊಣ್ಣೇಗೌಡ, ಚೌಡರೆಡ್ಡಿ ಮತ್ತು ನಾರಾಯಣಸ್ವಾಮಿ ಅವರನ್ನು ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಮಗಲ್ ಠಾಣೆ ಪೊಲೀಸರು ಕೊಲೆ ಯತ್ನ ಹಾಗೂ ಹಲ್ಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>