<p><strong>ಕೋಲಾರ</strong>: ತಾಲ್ಲೂಕಿನ ಹೊಳೇರಹಳ್ಳಿ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ.</p>.<p>ಮೇ 15ರಂದು ಈ ಘಟನೆ ನಡೆದಿದ್ದು, ಗ್ರಾಮದ ಚಿಕ್ಕ ವೆಂಕಟೇಶಪ್ಪ ಮತ್ತು ಅಶೋಕ್ ಎಂಬುವರ ಕುಟುಂಬಗಳ 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಮೀನು ಒಡೆತನದ ವಿಚಾರವಾಗಿ ಚಿಕ್ಕ ವೆಂಕಟೇಶಪ್ಪ ಮತ್ತು ಅಶೋಕ್ ಕುಟುಂಬದ ನಡುವೆ ವಿವಾದವಿತ್ತು. ಕಂದಾಯ ಇಲಾಖೆ ಅಧಿಕಾರಿಗಳು ಮೇ 15ರಂದು ಹೊಳೇರಹಳ್ಳಿಯ ಸ್ಮಶಾನ ಜಾಗದ ಸರ್ವೆ ಮಾಡಲು ಹೋಗಿದ್ದಾಗ ಎರಡೂ ಕುಟುಂಬಗಳ ನಡುವೆ ಪರಸ್ಪರ ವಾಗ್ವಾದ ನಡೆದು ಜಗಳವಾಗಿದೆ.</p>.<p>ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉಭಯ ಕುಟುಂಬಗಳ ಸದಸ್ಯರು ಪರಸ್ಪರ ದೊಣ್ಣೆ ಮತ್ತು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಮಹಿಳೆಯರನ್ನು ಅಟ್ಟಾಡಿಸಿ ದೊಣ್ಣೆಗಳಿಂದ ಥಳಿಸಲಾಗಿದೆ. ಗಾಯಾಳು ಮಹಿಳೆಯರು ನೆಲದಲ್ಲಿ ಬಿದ್ದು ಗೋಳಾಡುವ ವಿಡಿಯೋ ವೈರಲ್ ಆಗಿದೆ.</p>.<p>ಘಟನೆಯಲ್ಲಿ ಚಿಕ್ಕ ವೆಂಕಟೇಶಪ್ಪ ಅವರ ಕೈಗಳು ಮುರಿದಿವೆ. ಅಶೋಕ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಇಬ್ಬರು ಮಹಿಳೆಯರ ಬೆನ್ನು ಮೂಳೆ ಮುರಿದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಕುಟುಂಬಗಳು ವೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು– ಪ್ರತಿದೂರು ದಾಖಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ಹೊಳೇರಹಳ್ಳಿ ಗ್ರಾಮದಲ್ಲಿ ಜಮೀನು ವಿವಾದ ಸಂಬಂಧ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ.</p>.<p>ಮೇ 15ರಂದು ಈ ಘಟನೆ ನಡೆದಿದ್ದು, ಗ್ರಾಮದ ಚಿಕ್ಕ ವೆಂಕಟೇಶಪ್ಪ ಮತ್ತು ಅಶೋಕ್ ಎಂಬುವರ ಕುಟುಂಬಗಳ 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಮೀನು ಒಡೆತನದ ವಿಚಾರವಾಗಿ ಚಿಕ್ಕ ವೆಂಕಟೇಶಪ್ಪ ಮತ್ತು ಅಶೋಕ್ ಕುಟುಂಬದ ನಡುವೆ ವಿವಾದವಿತ್ತು. ಕಂದಾಯ ಇಲಾಖೆ ಅಧಿಕಾರಿಗಳು ಮೇ 15ರಂದು ಹೊಳೇರಹಳ್ಳಿಯ ಸ್ಮಶಾನ ಜಾಗದ ಸರ್ವೆ ಮಾಡಲು ಹೋಗಿದ್ದಾಗ ಎರಡೂ ಕುಟುಂಬಗಳ ನಡುವೆ ಪರಸ್ಪರ ವಾಗ್ವಾದ ನಡೆದು ಜಗಳವಾಗಿದೆ.</p>.<p>ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉಭಯ ಕುಟುಂಬಗಳ ಸದಸ್ಯರು ಪರಸ್ಪರ ದೊಣ್ಣೆ ಮತ್ತು ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಮಹಿಳೆಯರನ್ನು ಅಟ್ಟಾಡಿಸಿ ದೊಣ್ಣೆಗಳಿಂದ ಥಳಿಸಲಾಗಿದೆ. ಗಾಯಾಳು ಮಹಿಳೆಯರು ನೆಲದಲ್ಲಿ ಬಿದ್ದು ಗೋಳಾಡುವ ವಿಡಿಯೋ ವೈರಲ್ ಆಗಿದೆ.</p>.<p>ಘಟನೆಯಲ್ಲಿ ಚಿಕ್ಕ ವೆಂಕಟೇಶಪ್ಪ ಅವರ ಕೈಗಳು ಮುರಿದಿವೆ. ಅಶೋಕ್ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಇಬ್ಬರು ಮಹಿಳೆಯರ ಬೆನ್ನು ಮೂಳೆ ಮುರಿದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಕುಟುಂಬಗಳು ವೇಮಗಲ್ ಪೊಲೀಸ್ ಠಾಣೆಯಲ್ಲಿ ದೂರು– ಪ್ರತಿದೂರು ದಾಖಲಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>