<p><strong>ಕೋಲಾರ: </strong>‘ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಭಾರತೀಯ ಹಿತರಕ್ಷಣಾ ವೇದಿಕೆಯು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲಾಠಿ ಪ್ರಹಾರಕ್ಕೆ ಕಾರಣರಾದವರ ವಿರುದ್ಧ ದೂರು ದಾಖಲಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾನೂನು ಎಲ್ಲರಿಗೂ ಒಂದೇ. ಕಾನೂನು ಉಲ್ಲಂಘಿಸಿದವರು ಶಿಕ್ಷೆಗೆ ಒಳಗಾಬೇಕಾಗುತ್ತದೆ. ಜಿಲ್ಲಾ ಕೇಂದ್ರವು ಸೂಕ್ಷ್ಮ ಪ್ರದೇಶವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ’ ಎಂದು ಲಾಠಿ ಪ್ರಹಾರದ ಕ್ರಮ ಸಮರ್ಥಿಸಿದರು.</p>.<p>‘ಲಾಠಿ ಪ್ರಹಾರದ ವಿಚಾರವಾಗಿ ಸಂಸದರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಸಿಎಎ ಪರವಾಗಿ ಡಿ.೨೮ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಜ.೪ಕ್ಕೆ ಮುಂದೂಡಲಾಯಿತು. ಎಂ.ಜಿ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಲು ಅವಕಾಶ ನೀಡಲಾಗಿತ್ತು. ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು’ ಎಂದು ಸ್ಪಷ್ಟಪಡಿಸಿದರು.</p>.<p>‘ಸ್ವಯಂ ನಿಯಂತ್ರಣ ನಾವೇ ಮಾಡಿಕೊಳ್ಳಬೇಕು. ಯಾರೇ ಆಗಲಿ ತಮ್ಮ ಹಕ್ಕಿನ ಜತೆಗೆ ಜವಾಬ್ದಾರಿ ಅರಿಯಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಬಾರದು. ನಾವು ಯಾರ ವಿರುದ್ಧವೂ ದ್ವೇಷ ಸಾಧಿಸುವುದಿಲ್ಲ. ಅದರ ಅಗತ್ಯವೂ ನಮಗಿಲ್ಲ. ಜಿಲ್ಲಾ ಕೇಂದ್ರದಲ್ಲಿ ಈ ಹಿಂದೆ ನಡೆದಿರುವ ಘಟನೆಗಳನ್ನು ಪ್ರತಿಯೊಬ್ಬರೂ ಅವಲೋಕಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕೆಲ ವ್ಯಕ್ತಿಗಳು ವೈಯಕ್ತಿಕ ಪ್ರತಿಷ್ಠೆಗಾಗಿ ಬ್ಯಾರಿಕೇಡ್ ತಳ್ಳಿ ಕ್ಲಾಕ್ಟವರ್ ಕಡೆಗೆ ಹೋಗಲು ಯತ್ನಿಸಿದ್ದರಿಂದ ಪೊಲೀಸರು ಮುತುವರ್ಜಿ ವಹಿಸಿ ಸಂಭವನೀಯ ಅನಾಹುತ ತಡೆಗೆ ಕ್ರಮ ಕೈಗೊಂಡಿದ್ದಾರೆ. ಕೋಲಾರದಲ್ಲಿ ಈ ಹಿಂದೆ ಲೋಕಸಭೆ ಮತ್ತು ನಗರಸಭೆ ಚುನಾವಣೆ ನಡೆಸಿದ್ದೇವೆ. ಲಕ್ಷಾಂತರ ಮತದಾರರಿದ್ದರೂ ಹೊರ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿ ಕರೆಸಿರಲಿಲ್ಲ. ಆದರೆ, ಸಿಎಎ ಬೆಂಬಲಿಸಿ ನಡೆದ ಬಹಿರಂಗ ಸಭೆಗೆ ಹೊರ ಜಿಲ್ಲೆಗಳ ಪೊಲೀಸರು ಬಂದಿದ್ದಾರೆಂದರೆ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p><strong>ಸಂದೇಶ ನೀಡಿದೆ</strong></p>.<p>‘ಕೋಲಾರದಲ್ಲಿ ೩ ದಶಕದ ಹಿಂದೆ ಆದ ಘಟನೆಗಳೆಲ್ಲಾ ಗೊತ್ತಿದ್ದರೂ ಶಾಂತಿ ಕದಡುವ ಕೆಲಸಕ್ಕೆ ಮುಂದಾಗುವುದು ಸರಿಯಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಾನೂನು ಇಲ್ಲ. ಸರ್ಕಾರಿ ಅಧಿಕಾರಿಗಳಾದ ನಾವು ಸರ್ಕಾರದ ಮಾರ್ಗಸೂಚಿಯಂತೆ ಕೆಲಸ ಮಾಡಬೇಕಷ್ಟೇ’ ಎಂದು ತಿಳಿಸಿದರು.</p>.<p>‘ಬಹಿರಂಗ ಸಭೆ ಆಯೋಜಕರು ಕರ್ತವ್ಯ ನಿಭಾಯಿಸದೆ ಮೆರವಣಿಗೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡರು. ಕಾನೂನು ಸುವ್ಯವಸ್ಥೆ ಪಾಲನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಕಾಲಕ್ಕೆ ಸರಿಯಾದ ಕ್ರಮ ಕೈಗೊಂಡು ಮುಂದೆ ಇಂತಹ ಚಟುವಟಿಕೆ ನಡೆಸುವವರಿಗೆ ಸೂಕ್ತ ಸಂದೇಶ ನೀಡಿದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಭಾರತೀಯ ಹಿತರಕ್ಷಣಾ ವೇದಿಕೆಯು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲಾಠಿ ಪ್ರಹಾರಕ್ಕೆ ಕಾರಣರಾದವರ ವಿರುದ್ಧ ದೂರು ದಾಖಲಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾನೂನು ಎಲ್ಲರಿಗೂ ಒಂದೇ. ಕಾನೂನು ಉಲ್ಲಂಘಿಸಿದವರು ಶಿಕ್ಷೆಗೆ ಒಳಗಾಬೇಕಾಗುತ್ತದೆ. ಜಿಲ್ಲಾ ಕೇಂದ್ರವು ಸೂಕ್ಷ್ಮ ಪ್ರದೇಶವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ’ ಎಂದು ಲಾಠಿ ಪ್ರಹಾರದ ಕ್ರಮ ಸಮರ್ಥಿಸಿದರು.</p>.<p>‘ಲಾಠಿ ಪ್ರಹಾರದ ವಿಚಾರವಾಗಿ ಸಂಸದರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಸಿಎಎ ಪರವಾಗಿ ಡಿ.೨೮ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಜ.೪ಕ್ಕೆ ಮುಂದೂಡಲಾಯಿತು. ಎಂ.ಜಿ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಲು ಅವಕಾಶ ನೀಡಲಾಗಿತ್ತು. ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು’ ಎಂದು ಸ್ಪಷ್ಟಪಡಿಸಿದರು.</p>.<p>‘ಸ್ವಯಂ ನಿಯಂತ್ರಣ ನಾವೇ ಮಾಡಿಕೊಳ್ಳಬೇಕು. ಯಾರೇ ಆಗಲಿ ತಮ್ಮ ಹಕ್ಕಿನ ಜತೆಗೆ ಜವಾಬ್ದಾರಿ ಅರಿಯಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಬಾರದು. ನಾವು ಯಾರ ವಿರುದ್ಧವೂ ದ್ವೇಷ ಸಾಧಿಸುವುದಿಲ್ಲ. ಅದರ ಅಗತ್ಯವೂ ನಮಗಿಲ್ಲ. ಜಿಲ್ಲಾ ಕೇಂದ್ರದಲ್ಲಿ ಈ ಹಿಂದೆ ನಡೆದಿರುವ ಘಟನೆಗಳನ್ನು ಪ್ರತಿಯೊಬ್ಬರೂ ಅವಲೋಕಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕೆಲ ವ್ಯಕ್ತಿಗಳು ವೈಯಕ್ತಿಕ ಪ್ರತಿಷ್ಠೆಗಾಗಿ ಬ್ಯಾರಿಕೇಡ್ ತಳ್ಳಿ ಕ್ಲಾಕ್ಟವರ್ ಕಡೆಗೆ ಹೋಗಲು ಯತ್ನಿಸಿದ್ದರಿಂದ ಪೊಲೀಸರು ಮುತುವರ್ಜಿ ವಹಿಸಿ ಸಂಭವನೀಯ ಅನಾಹುತ ತಡೆಗೆ ಕ್ರಮ ಕೈಗೊಂಡಿದ್ದಾರೆ. ಕೋಲಾರದಲ್ಲಿ ಈ ಹಿಂದೆ ಲೋಕಸಭೆ ಮತ್ತು ನಗರಸಭೆ ಚುನಾವಣೆ ನಡೆಸಿದ್ದೇವೆ. ಲಕ್ಷಾಂತರ ಮತದಾರರಿದ್ದರೂ ಹೊರ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿ ಕರೆಸಿರಲಿಲ್ಲ. ಆದರೆ, ಸಿಎಎ ಬೆಂಬಲಿಸಿ ನಡೆದ ಬಹಿರಂಗ ಸಭೆಗೆ ಹೊರ ಜಿಲ್ಲೆಗಳ ಪೊಲೀಸರು ಬಂದಿದ್ದಾರೆಂದರೆ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p><strong>ಸಂದೇಶ ನೀಡಿದೆ</strong></p>.<p>‘ಕೋಲಾರದಲ್ಲಿ ೩ ದಶಕದ ಹಿಂದೆ ಆದ ಘಟನೆಗಳೆಲ್ಲಾ ಗೊತ್ತಿದ್ದರೂ ಶಾಂತಿ ಕದಡುವ ಕೆಲಸಕ್ಕೆ ಮುಂದಾಗುವುದು ಸರಿಯಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಾನೂನು ಇಲ್ಲ. ಸರ್ಕಾರಿ ಅಧಿಕಾರಿಗಳಾದ ನಾವು ಸರ್ಕಾರದ ಮಾರ್ಗಸೂಚಿಯಂತೆ ಕೆಲಸ ಮಾಡಬೇಕಷ್ಟೇ’ ಎಂದು ತಿಳಿಸಿದರು.</p>.<p>‘ಬಹಿರಂಗ ಸಭೆ ಆಯೋಜಕರು ಕರ್ತವ್ಯ ನಿಭಾಯಿಸದೆ ಮೆರವಣಿಗೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡರು. ಕಾನೂನು ಸುವ್ಯವಸ್ಥೆ ಪಾಲನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಕಾಲಕ್ಕೆ ಸರಿಯಾದ ಕ್ರಮ ಕೈಗೊಂಡು ಮುಂದೆ ಇಂತಹ ಚಟುವಟಿಕೆ ನಡೆಸುವವರಿಗೆ ಸೂಕ್ತ ಸಂದೇಶ ನೀಡಿದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>