ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ರಚನೆ ಆದಾಗಿನಿಂದಲೂ ಅಧಿಕಾರಕ್ಕಾಗಿ ಬಿಜೆಪಿ ಮುಖಂಡರು ಇಲ್ಲದ ಕಸರತ್ತು ಮಾಡುತ್ತಿದ್ದಾರೆ. ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದು, ಸರ್ಕಾರದ ಯೋಜನೆಗಳಿಗೂ ಅಡ್ಡಿಪಡಿಸುತ್ತಿದ್ದಾರೆ. ಬಿಜೆಪಿಯವರ ಕಿತಾಪತಿಯಿಂದಾಗಿ ತೊಂದರೆಅನುಭವಿಸುತ್ತಿರುವ ಸಾರ್ವಜನಿಕರು ಎಂದಿಗೂ ಬಿಜೆಪಿಯವರನ್ನು ಕ್ಷಮಿಸುವುದಿಲ್ಲ’ಎಂದರು.