<p><strong>ಕೆಜಿಎಫ್:</strong> ನ್ಯಾಯಾಂಗದಲ್ಲಿ ತ್ವರಿತ ಮತ್ತು ಕಡಿಮೆ ವೆಚ್ಚದಲ್ಲಿ ವ್ಯಾಜ್ಯ ಬಗೆಹರಿಸುವ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಶಿವಕುಮಾರ್ ತಿಳಿಸಿದರು.</p><p>ರಾಬರ್ಟಸನ್ಪೇಟೆಯ ನ್ಯಾಯಾಲಯದ ಸಂಕೀರ್ಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಧಿಕಾರವು ಲೋಕ ಅದಾಲತ್ ಕಾರ್ಯಕ್ರಮವನ್ನು<br>ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ದೇಶದ ಮೂಲೆ ಮೂಲೆಗಳಲ್ಲಿ ನಡೆಯುವ ಅದಾಲತ್ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥವಾಗದೆ ಇರುವುದು ವಿಷಾಧನೀಯ ಎಂದರು.</p><p>ಕೆಜಿಎಫ್ ನ್ಯಾಯಾಲಯ ಸಂಕೀರ್ಣದಲ್ಲಿ 10231 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ವಿಚಾರಣೆ ನಡೆಸಲಾಗಿದೆ. 8,291 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದೇವೆ. ಶೇ 80 ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಿರುವುದರಿಂದ ಕಕ್ಷಿದಾರರಿಗೆ ನ್ಯಾಯ ಸಿಕ್ಕಿದೆ. ಈ ನಿಟ್ಟಿನಲ್ಲಿ ವಕೀಲರು ಸೇರಿದಂತೆ ಹಲವು ಇಲಾಖೆಗಳ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.</p><p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಯೋಜನೆಗಳು ಫಲಾನುಭವಿಗಳಿಗೆ ಸಿಗುವ ಬಗ್ಗೆ ಕೂಡ ನ್ಯಾಯಾಲಯ ವೀಕ್ಷಣೆ ಮಾಡುತ್ತಿದೆ. ಸರ್ಕಾರದ ಯೋಜನೆಗಳ ತಿಳುವಳಿಕೆ ಫಲಾನುಭವಿಗಳಿಗೆ ಸಿಗುತ್ತಿಲ್ಲ. ಈ ದಿಕ್ಕಿನಲ್ಲಿ ಕೂಡ ನ್ಯಾಯಾಲಯದ ಜೊತೆಗೆ ಎಲ್ಲರೂ ಸಹಕರಿಸಬೇಕು ಎಂದರು.</p><p>ನ್ಯಾಯಾಲಯದಿಂದ ಸಿಗುವ ಕಾನೂನು ಸೇವೆಗಳ ಬಗ್ಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಎನ್.ಬಿ.ಜಯಲಕ್ಷ್ಮಿ ಮಾಹಿತಿ ನೀಡಿದರು.</p><p>ನ್ಯಾಯಾಧೀಶರಾದ ಎಂ.ವಿನೋದ್ ಕುಮಾರ್, ಕೆ.ಶಮಿದ, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ, ವಕೀಲರ ಸಂಘದ ಕಾರ್ಯದರ್ಶಿ ಕೆ.ಸಿ.ನಾಗರಾಜ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ನ್ಯಾಯಾಂಗದಲ್ಲಿ ತ್ವರಿತ ಮತ್ತು ಕಡಿಮೆ ವೆಚ್ಚದಲ್ಲಿ ವ್ಯಾಜ್ಯ ಬಗೆಹರಿಸುವ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಶಿವಕುಮಾರ್ ತಿಳಿಸಿದರು.</p><p>ರಾಬರ್ಟಸನ್ಪೇಟೆಯ ನ್ಯಾಯಾಲಯದ ಸಂಕೀರ್ಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಧಿಕಾರವು ಲೋಕ ಅದಾಲತ್ ಕಾರ್ಯಕ್ರಮವನ್ನು<br>ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ದೇಶದ ಮೂಲೆ ಮೂಲೆಗಳಲ್ಲಿ ನಡೆಯುವ ಅದಾಲತ್ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರರಣಗಳನ್ನು ಇತ್ಯರ್ಥ ಪಡಿಸಲಾಗುತ್ತಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥವಾಗದೆ ಇರುವುದು ವಿಷಾಧನೀಯ ಎಂದರು.</p><p>ಕೆಜಿಎಫ್ ನ್ಯಾಯಾಲಯ ಸಂಕೀರ್ಣದಲ್ಲಿ 10231 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ವಿಚಾರಣೆ ನಡೆಸಲಾಗಿದೆ. 8,291 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದೇವೆ. ಶೇ 80 ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಿರುವುದರಿಂದ ಕಕ್ಷಿದಾರರಿಗೆ ನ್ಯಾಯ ಸಿಕ್ಕಿದೆ. ಈ ನಿಟ್ಟಿನಲ್ಲಿ ವಕೀಲರು ಸೇರಿದಂತೆ ಹಲವು ಇಲಾಖೆಗಳ ಕೊಡುಗೆ ಸಾಕಷ್ಟಿದೆ ಎಂದು ಹೇಳಿದರು.</p><p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಯೋಜನೆಗಳು ಫಲಾನುಭವಿಗಳಿಗೆ ಸಿಗುವ ಬಗ್ಗೆ ಕೂಡ ನ್ಯಾಯಾಲಯ ವೀಕ್ಷಣೆ ಮಾಡುತ್ತಿದೆ. ಸರ್ಕಾರದ ಯೋಜನೆಗಳ ತಿಳುವಳಿಕೆ ಫಲಾನುಭವಿಗಳಿಗೆ ಸಿಗುತ್ತಿಲ್ಲ. ಈ ದಿಕ್ಕಿನಲ್ಲಿ ಕೂಡ ನ್ಯಾಯಾಲಯದ ಜೊತೆಗೆ ಎಲ್ಲರೂ ಸಹಕರಿಸಬೇಕು ಎಂದರು.</p><p>ನ್ಯಾಯಾಲಯದಿಂದ ಸಿಗುವ ಕಾನೂನು ಸೇವೆಗಳ ಬಗ್ಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷೆ ಎನ್.ಬಿ.ಜಯಲಕ್ಷ್ಮಿ ಮಾಹಿತಿ ನೀಡಿದರು.</p><p>ನ್ಯಾಯಾಧೀಶರಾದ ಎಂ.ವಿನೋದ್ ಕುಮಾರ್, ಕೆ.ಶಮಿದ, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್.ರಾಜಗೋಪಾಲಗೌಡ, ವಕೀಲರ ಸಂಘದ ಕಾರ್ಯದರ್ಶಿ ಕೆ.ಸಿ.ನಾಗರಾಜ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>