ಪ್ರಜಾಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 'ಕಾಂಗ್ರೆಸ್ ಧ್ವನಿ ಕಳೆದುಕೊಂಡಿರುವ ಪಕ್ಷ. ಅದಕ್ಕಾಗಿಯೇ ಅದು ಪ್ರಜಾ ಧ್ವನಿ ಯಾತ್ರೆ ನಡೆಸುತ್ತಿದೆ. ಇಡೀ ದೇಶದಲ್ಲಿ ಈಗಾಗಲೇ 3, 4ನೇ ಸ್ಥಾನಕ್ಕೆ ಕಾಂಗ್ರೆಸ್ ತಲುಪಿದೆ. ಒಂದು ರಾಜ್ಯದಲ್ಲಿ ಒಂದೆರಡು ಶಾಸಕರು ಗೆಲ್ಲಿಸಿಕೊಡಲು ಸಾಧ್ಯವಾಗಿಲ್ಲ. ಇದೇ ಗತಿ ಕರ್ನಾಟಕದಲ್ಲೂ ಬರಲಿದೆ' ಎಂದರು.