<p><strong>ಕೋಲಾರ:</strong> ‘ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾದರೆ ಮಾತ್ರ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾಡಳಿತವು ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಉದ್ಘಾಟಿಸಿ ಮಾತನಾಡಿ, ‘ಚುನಾವಣೆ ಹತ್ತಿರ ಬಂದಾಗ ರಾಜಕಾರಣಿಗಳಿಗೆ ಎಲ್ಲರ ನೆನಪು ಬರುತ್ತದೆ. ಅಂತಹ ಸಂದರ್ಭದಲ್ಲಿ ಎಲ್ಲಾ ಸಮುದಾಯದವರು ನಿರ್ಣಾಯಕ ಪಾತ್ರ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸವಿತಾ ಸಮಾಜ ಶುಭ ಕಾರ್ಯಗಳಿಗೆ ಮುಂದಿರುತ್ತದೆ. ಆದರೆ, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮುಖಂಡರಿಗೆ ಸಾಧ್ಯವಾಗುತ್ತಿಲ್ಲ. ಸಮುದಾಯ ಸಂಘಟಿತವಾಗುವ ಮೂಲಕ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು. ಸರ್ಕಾರದ ಸವಲತ್ತುಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕನ್ನಡ ಭಾಷೆ ವಿಚಾರದಲ್ಲಿ ಪ್ರತಿಯೊಬ್ಬರು ಜಾತಿ, ಧರ್ಮ ಬಿಟ್ಟು ಕೆಲಸ ಮಾಡಬೇಕು. ನಾನು ಜಿ.ಪಂ ಸದಸ್ಯನಾಗಿ ಆಯ್ಕೆಯಾಗುವಲ್ಲಿ ಸವಿತಾ ಸಮುದಾಯದವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅದೇ ರೀತಿ ಅಧ್ಯಕ್ಷನಾಗಲು ಸಮುದಾಯದ ಸಹಕಾರ ಸಿಕ್ಕಿದೆ’ ಎಂದರು.</p>.<p><strong>ಬದುಕಿಗೆ ದಾರಿ ದೀಪ</strong></p>.<p>‘ಯಾವುದೇ ಸಮುದಾಯಕ್ಕೆ ಗುರು ಮುಖ್ಯ ಪಾತ್ರ ವಹಿಸುತ್ತಾನೆ. ಅಂತಹ ಗುರುಗಳ ಆಚಾರ ವಿಚಾರ ಬದುಕಿಗೆ ದಾರಿ ದೀಪವಾಗಿದೆ’ ಎಂದು ತಹಶೀಲ್ದಾರ್ ಶೋಭಿತಾ ಹೇಳಿದರು.</p>.<p>‘ಗುರುಗಳ ಹಾದಿಯಲ್ಲಿ ಸಾಗಿ ಆಚಾರ ವಿಚಾರ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಸತ್ಪ್ರಜೆಗಳಾಗಬಹುದು. ಮುಂದಿನ ಪೀಳಿಗೆಗೆ ಗುರುಗಳ ಮಾರ್ಗದರ್ಶನ ಪರಿಚಯಿಸಬೇಕು. ಸಮಾಜದಲ್ಲಿ ಹಿಂದುಳಿದಿರುವ ಸಮುದಾಯಗಳ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಗ್ರಾಮೀಣ ಭಾಗದಲ್ಲಿ ಈಗಾಗಲೇ ಭೂಮಿ ಮತ್ತು ವಸತಿರಹಿತರನ್ನು ಗುರುತಿಸಲಾಗಿದೆ. ಅವರಿಗೆ ಭೂಮಿ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಹಿಂದುಳಿದ ಸಮುದಾಯಗಳ ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p><strong>ಅಭಿವೃದ್ಧಿಗೆ ಒತ್ತು</strong></p>.<p>‘ತಳ ಸಮುದಾಯಗಳು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ. ಈ ಬಗ್ಗೆ ಸರ್ಕಾರಗಳು ಎಚ್ಚೆತ್ತು ತಳ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು’ ಎಂದು ಸವಿತಾ ಸಮಾಜದ ರಾಜ್ಯ ಘಟಕದ ನಿರ್ದೇಶಕ ಬಿ.ಟಿ.ಆನಂದ್ ಮನವಿ ಮಾಡಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಸವಿತಾ ಮಹರ್ಷಿ ಭಾವಚಿತ್ರಗಳ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸವಿತಾ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಗಣೇಶ್, ಸವಿತಾ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಬಂಗಾರಪೇಟೆ ಎಪಿಎಂಸಿ ನಿರ್ದೇಶಕ ಎಂ.ನಾರಾಯಣಸ್ವಾಮಿ, ವೈದ್ಯ ಡಾ.ಡಿ.ಕೆ.ರಮೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾದರೆ ಮಾತ್ರ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾಡಳಿತವು ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಉದ್ಘಾಟಿಸಿ ಮಾತನಾಡಿ, ‘ಚುನಾವಣೆ ಹತ್ತಿರ ಬಂದಾಗ ರಾಜಕಾರಣಿಗಳಿಗೆ ಎಲ್ಲರ ನೆನಪು ಬರುತ್ತದೆ. ಅಂತಹ ಸಂದರ್ಭದಲ್ಲಿ ಎಲ್ಲಾ ಸಮುದಾಯದವರು ನಿರ್ಣಾಯಕ ಪಾತ್ರ ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸವಿತಾ ಸಮಾಜ ಶುಭ ಕಾರ್ಯಗಳಿಗೆ ಮುಂದಿರುತ್ತದೆ. ಆದರೆ, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮುಖಂಡರಿಗೆ ಸಾಧ್ಯವಾಗುತ್ತಿಲ್ಲ. ಸಮುದಾಯ ಸಂಘಟಿತವಾಗುವ ಮೂಲಕ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು. ಸರ್ಕಾರದ ಸವಲತ್ತುಗಳ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕನ್ನಡ ಭಾಷೆ ವಿಚಾರದಲ್ಲಿ ಪ್ರತಿಯೊಬ್ಬರು ಜಾತಿ, ಧರ್ಮ ಬಿಟ್ಟು ಕೆಲಸ ಮಾಡಬೇಕು. ನಾನು ಜಿ.ಪಂ ಸದಸ್ಯನಾಗಿ ಆಯ್ಕೆಯಾಗುವಲ್ಲಿ ಸವಿತಾ ಸಮುದಾಯದವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅದೇ ರೀತಿ ಅಧ್ಯಕ್ಷನಾಗಲು ಸಮುದಾಯದ ಸಹಕಾರ ಸಿಕ್ಕಿದೆ’ ಎಂದರು.</p>.<p><strong>ಬದುಕಿಗೆ ದಾರಿ ದೀಪ</strong></p>.<p>‘ಯಾವುದೇ ಸಮುದಾಯಕ್ಕೆ ಗುರು ಮುಖ್ಯ ಪಾತ್ರ ವಹಿಸುತ್ತಾನೆ. ಅಂತಹ ಗುರುಗಳ ಆಚಾರ ವಿಚಾರ ಬದುಕಿಗೆ ದಾರಿ ದೀಪವಾಗಿದೆ’ ಎಂದು ತಹಶೀಲ್ದಾರ್ ಶೋಭಿತಾ ಹೇಳಿದರು.</p>.<p>‘ಗುರುಗಳ ಹಾದಿಯಲ್ಲಿ ಸಾಗಿ ಆಚಾರ ವಿಚಾರ ಮೈಗೂಡಿಸಿಕೊಂಡರೆ ಸಮಾಜದಲ್ಲಿ ಸತ್ಪ್ರಜೆಗಳಾಗಬಹುದು. ಮುಂದಿನ ಪೀಳಿಗೆಗೆ ಗುರುಗಳ ಮಾರ್ಗದರ್ಶನ ಪರಿಚಯಿಸಬೇಕು. ಸಮಾಜದಲ್ಲಿ ಹಿಂದುಳಿದಿರುವ ಸಮುದಾಯಗಳ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಗ್ರಾಮೀಣ ಭಾಗದಲ್ಲಿ ಈಗಾಗಲೇ ಭೂಮಿ ಮತ್ತು ವಸತಿರಹಿತರನ್ನು ಗುರುತಿಸಲಾಗಿದೆ. ಅವರಿಗೆ ಭೂಮಿ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಹಿಂದುಳಿದ ಸಮುದಾಯಗಳ ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p><strong>ಅಭಿವೃದ್ಧಿಗೆ ಒತ್ತು</strong></p>.<p>‘ತಳ ಸಮುದಾಯಗಳು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ. ಈ ಬಗ್ಗೆ ಸರ್ಕಾರಗಳು ಎಚ್ಚೆತ್ತು ತಳ ಸಮುದಾಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು’ ಎಂದು ಸವಿತಾ ಸಮಾಜದ ರಾಜ್ಯ ಘಟಕದ ನಿರ್ದೇಶಕ ಬಿ.ಟಿ.ಆನಂದ್ ಮನವಿ ಮಾಡಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಸವಿತಾ ಮಹರ್ಷಿ ಭಾವಚಿತ್ರಗಳ ಪಲ್ಲಕ್ಕಿ ಮೆರವಣಿಗೆ ನಡೆಸಲಾಯಿತು. ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸವಿತಾ ಸಮಾಜದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಗಣೇಶ್, ಸವಿತಾ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಬಂಗಾರಪೇಟೆ ಎಪಿಎಂಸಿ ನಿರ್ದೇಶಕ ಎಂ.ನಾರಾಯಣಸ್ವಾಮಿ, ವೈದ್ಯ ಡಾ.ಡಿ.ಕೆ.ರಮೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>