ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಂಜೇಗೌಡರ ರಾಜೀನಾಮೆ ಸವಾಲು ಸ್ವೀಕರಿಸಿದ್ದೇನೆ. ಅವರ ವಿರುದ್ಧ ಮಾಡಿರುವ ಆಮಿಷದ ಆರೋಪಕ್ಕೆ ಬದ್ಧವಾಗಿದ್ದೇನೆ. ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ಮಾತನಾಡಿರುವ ನಂಜೇಗೌಡರಿಗೆ ನೈತಿಕತೆಯಿದ್ದರೆ ಧರ್ಮಸ್ಥಳಕ್ಕೆ ಬಂದು ದೇವರ ಮೇಲೆ ಆಣೆ ಮಾಡಲಿ’ ಎಂದು ತಿರುಗೇಟು ನೀಡಿದರು.