<p><strong>ಕೋಲಾರ: </strong>‘ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರನ್ನು ಭಾರತದಿಂದ ತೊಲಗಿಸಲು ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭಿಸಿದ ಕಾಂಗ್ರೆಸ್ ಪಕ್ಷವು ದೇಶದ ಸರ್ವತ್ತೋಮುಖ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.</p>.<p>ಕ್ವಿಟ್ ಇಂಡಿಯಾ ಸ್ಮರಣೆ ಪ್ರಯುಕ್ತ ಇಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ ತಂದು ಕೊಡುವಲ್ಲಿ ಕಾಂಗ್ರೆಸ್ ನಿರ್ಣಾಯಕ ಪಾತ್ರ ವಹಿಸಿತು’ ಎಂದರು.</p>.<p>‘ಕ್ವಿಟ್ ಇಂಡಿಯಾ ಆಂದೋಲನವು ಕಾಂಗ್ರೆಸ್ ಪಕ್ಷದ ಸಾಧನೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತ ಇದಕ್ಕೆ ಕಾರಣ. ದೇಶವನ್ನು ಬಿಜೆಪಿ ಮುಕ್ತವಾಗಿಸಲು ಕ್ವಿಟ್ ಬಿಜೆಪಿ ಆಂದೋಲನ ಆರಂಭವಾಗಬೇಕು’ ಎಂದು ಕಿಡಿಕಾರಿದರು.</p>.<p>‘6 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮೋದಿ ಅವರ ಜನವಿರೋಧಿ ನೀತಿಗಳಿಂದ ದೇಶದ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ಅರ್ಥ ವ್ಯವಸ್ಥೆ 50 ವರ್ಷಗಳಷ್ಟು ಹಿಂದಕ್ಕೆ ಸರಿದಿದೆ. ಜನರೇ ಬಿಜೆಪಿಯನ್ನು ದೇಶದಿಂದ ಉಚ್ಛಾಟಿಸುವ ಕಾಲ ಹತ್ತಿರ ಬಂದಿದೆ’ ಎಂದು ಗುಡುಗಿದರು.</p>.<p><strong>ಇತಿಹಾಸಕ್ಕೆ ನಾಂದಿ: </strong>‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ. ಬ್ರಿಟೀಷರ ದಾಸ್ಯದಿಂದ ಭಾರತೀಯರನ್ನು ಬಿಡುಗಡೆಗೊಳಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸಕ್ಕೆ ನಾಂದಿ ಹಾಡಿತು. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ನಡೆದ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯು ಅಸಹಕಾರ ಚಳವಳಿಯಾಗಿತ್ತು. ಸ್ವಾತಂತ್ರ್ಯ ಪಡೆಯುವುದು ಈ ಚಳವಳಿಯ ಗುರಿಯಾಗಿತ್ತು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ವಿವರಿಸಿದರು.</p>.<p>‘ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ನಾಯಕರ ಬಲಿದಾನ ಸ್ಮರಿಸಬೇಕು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮುರಳಿ, ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು, ಕೆಪಿಸಿಸಿ ಕಾರ್ಯದರ್ಶಿ ಕುಮಾರ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರನ್ನು ಭಾರತದಿಂದ ತೊಲಗಿಸಲು ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭಿಸಿದ ಕಾಂಗ್ರೆಸ್ ಪಕ್ಷವು ದೇಶದ ಸರ್ವತ್ತೋಮುಖ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.</p>.<p>ಕ್ವಿಟ್ ಇಂಡಿಯಾ ಸ್ಮರಣೆ ಪ್ರಯುಕ್ತ ಇಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ ತಂದು ಕೊಡುವಲ್ಲಿ ಕಾಂಗ್ರೆಸ್ ನಿರ್ಣಾಯಕ ಪಾತ್ರ ವಹಿಸಿತು’ ಎಂದರು.</p>.<p>‘ಕ್ವಿಟ್ ಇಂಡಿಯಾ ಆಂದೋಲನವು ಕಾಂಗ್ರೆಸ್ ಪಕ್ಷದ ಸಾಧನೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತ ಇದಕ್ಕೆ ಕಾರಣ. ದೇಶವನ್ನು ಬಿಜೆಪಿ ಮುಕ್ತವಾಗಿಸಲು ಕ್ವಿಟ್ ಬಿಜೆಪಿ ಆಂದೋಲನ ಆರಂಭವಾಗಬೇಕು’ ಎಂದು ಕಿಡಿಕಾರಿದರು.</p>.<p>‘6 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮೋದಿ ಅವರ ಜನವಿರೋಧಿ ನೀತಿಗಳಿಂದ ದೇಶದ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ಅರ್ಥ ವ್ಯವಸ್ಥೆ 50 ವರ್ಷಗಳಷ್ಟು ಹಿಂದಕ್ಕೆ ಸರಿದಿದೆ. ಜನರೇ ಬಿಜೆಪಿಯನ್ನು ದೇಶದಿಂದ ಉಚ್ಛಾಟಿಸುವ ಕಾಲ ಹತ್ತಿರ ಬಂದಿದೆ’ ಎಂದು ಗುಡುಗಿದರು.</p>.<p><strong>ಇತಿಹಾಸಕ್ಕೆ ನಾಂದಿ: </strong>‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ. ಬ್ರಿಟೀಷರ ದಾಸ್ಯದಿಂದ ಭಾರತೀಯರನ್ನು ಬಿಡುಗಡೆಗೊಳಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸಕ್ಕೆ ನಾಂದಿ ಹಾಡಿತು. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ನಡೆದ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯು ಅಸಹಕಾರ ಚಳವಳಿಯಾಗಿತ್ತು. ಸ್ವಾತಂತ್ರ್ಯ ಪಡೆಯುವುದು ಈ ಚಳವಳಿಯ ಗುರಿಯಾಗಿತ್ತು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ವಿವರಿಸಿದರು.</p>.<p>‘ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ನಾಯಕರ ಬಲಿದಾನ ಸ್ಮರಿಸಬೇಕು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮುರಳಿ, ಕಿಸಾನ್ ಖೇತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ಬಾಬು, ಕೆಪಿಸಿಸಿ ಕಾರ್ಯದರ್ಶಿ ಕುಮಾರ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>