<p><strong>ಕೋಲಾರ</strong>: ರಾಜ್ಯ ಬಿಜೆಪಿಯಲ್ಲಿ ಅನೇಕ ಗೊಂದಲಗಳು ಇರುವುದು ನಿಜ. ಆ ಎಲ್ಲ ಗೊಂದಲಗಳು ನಿವಾರಣೆಯಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರೆ ಬಿ.ಎಸ್. ಯಡಿಯೂರಪ್ಪ ಮತ್ತೆ ಪಕ್ಷದ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.</p>.<p>ತಾಲ್ಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಧ್ಯಕ್ಷರಾಗಿದ್ದಾಗ ಯಾರೂ ತುಟಿ ಪಿಟಿಕ್ ಎನ್ನುತ್ತಿರಲಿಲ್ಲ ಎಂದರು.</p>.<p>‘ಮೊದಲ ಬಾರಿಗೆ ಅಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಅನುಭವದ ಕೊರತೆ ಇದೆ. ಹಾಗಾಗಿ ಪಕ್ಷದಲ್ಲಿ ಗೊಂದಲಗಳು ಉಂಟಾಗಿವೆ. ಹಾಗಂತ ರಾಜ್ಯ ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾಯಿಸುವಂತೆ ನಾನೇನೂ ಒತ್ತಾಯ ಮಾಡುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಆಕಸ್ಮಾತ್ ಹೈಕಮಾಂಡ್ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿದರೆ ಬಿಜೆಪಿ ಅಧ್ಯಕ್ಷನಾಗಲು ನಾನು ಸಿದ್ಧ. ಪರಿಶಿಷ್ಟ ಪಂಗಡದ ನನಗೆ ಅವಕಾಶ ನೀಡಿದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುವೆ’ ಎಂದರು.</p>.<p>‘ಪಕ್ಷದೊಳಗೆ ಭಿನ್ನಾಭಿಪ್ರಾಯ ಸಹಜ. ನಾನು ಯಾವುದೇ ಬಣದ ಜೊತೆ ಗುರುತಿಸಿಕೊಂಡಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಿ ಭಿನ್ನಾಭಿಪ್ರಾಯ, ಗುಂಪುಗಾರಿಕೆ ಹೋಗಲಾಡಿಸುವೆ. 2028ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವಂತೆ ಮಾಡುತ್ತೇನೆ’ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.</p>.<div><blockquote>ನಾನು ಈವರೆಗೆ ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷಕ್ಕಾಗಿ ಸುಮಾರು ವರ್ಷಗಳಿಂದ ಶ್ರಮಿಸಿದ್ದು ಸೇವೆಯನ್ನು ಗುರುತಿಸಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಲಿ ಎಂಬ ಬೇಡಿಕೆ ಮಾತ್ರ ಇಡುತ್ತಿದ್ದೇನೆ.</blockquote><span class="attribution"> ಬಿ.ಶ್ರೀರಾಮುಲು, ಬಿಜೆಪಿ ಮುಖಂಡ</span></div>.<p>‘ಬಸನಗೌಡ ಪಾಟೀಲ ಯತ್ನಾಳ ಕೂಡ ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇದು ಸಂತೋಷ ತಂದಿದೆ. ಯಡಿಯೂರಪ್ಪ ಅವರಿಂದ ನಾವೆಲ್ಲಾ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ, ಆಶೀರ್ವಾದ ಮಾಡಿ ಅವಕಾಶ ಮಾಡಿಕೊಟ್ಟರೆ ಮತ್ತಷ್ಟು ಸಂತೋಷವಾಗಲಿದೆ’ ಎಂದರು.</p>.<p><strong>‘ನನಗೆ ನಾಟಕ ಮಾಡಲು ಬರಲ್ಲ’ </strong></p><p>‘ನನಗೆ ನಾಟಕ ಮಾಡಲು ಬರುವುದಿಲ್ಲ. ಇದ್ದದ್ದನ್ನು ಇದ್ದಂತೆ ನೇರವಾಗಿ ಮಾತನಾಡುತ್ತೇನೆ. ಸತ್ಯ ಧರ್ಮದ ಮೇಲೆ ರಾಜಕೀಯ ಮಾಡುತ್ತಿರುವೆ’ ಎಂದು ಶ್ರೀರಾಮುಲು ಹೇಳಿದ್ದಾರೆ. </p><p>ಕೆಲವರು ಪ್ರಪಂಚವೇ ತಮ್ಮ ಕೈಯಲ್ಲಿದೆ ಎಂಬಂತೆ ಬಿಂಬಿಸಿಕೊಳ್ಳುತ್ತಿರುತ್ತಾರೆ. ನಾಟಕ ಮಾಡಿ ರಾಜಕೀಯ ಸ್ಥಾನಮಾನ ಗಿಟ್ಟಿಸಿಕೊಂಡಿರುತ್ತಾರೆ. ನಾನು ಕೈಯಲ್ಲಿ ಕೈಲಾಸ ತೋರಿಸುವುದಿಲ್ಲ. ನಾನು ಸೋತಿದ್ದರೂ ಜನ ನನ್ನ ಪರವಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ರಾಜ್ಯ ಬಿಜೆಪಿಯಲ್ಲಿ ಅನೇಕ ಗೊಂದಲಗಳು ಇರುವುದು ನಿಜ. ಆ ಎಲ್ಲ ಗೊಂದಲಗಳು ನಿವಾರಣೆಯಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರೆ ಬಿ.ಎಸ್. ಯಡಿಯೂರಪ್ಪ ಮತ್ತೆ ಪಕ್ಷದ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.</p>.<p>ತಾಲ್ಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಧ್ಯಕ್ಷರಾಗಿದ್ದಾಗ ಯಾರೂ ತುಟಿ ಪಿಟಿಕ್ ಎನ್ನುತ್ತಿರಲಿಲ್ಲ ಎಂದರು.</p>.<p>‘ಮೊದಲ ಬಾರಿಗೆ ಅಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಅನುಭವದ ಕೊರತೆ ಇದೆ. ಹಾಗಾಗಿ ಪಕ್ಷದಲ್ಲಿ ಗೊಂದಲಗಳು ಉಂಟಾಗಿವೆ. ಹಾಗಂತ ರಾಜ್ಯ ಅಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾಯಿಸುವಂತೆ ನಾನೇನೂ ಒತ್ತಾಯ ಮಾಡುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ಆಕಸ್ಮಾತ್ ಹೈಕಮಾಂಡ್ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿದರೆ ಬಿಜೆಪಿ ಅಧ್ಯಕ್ಷನಾಗಲು ನಾನು ಸಿದ್ಧ. ಪರಿಶಿಷ್ಟ ಪಂಗಡದ ನನಗೆ ಅವಕಾಶ ನೀಡಿದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುವೆ’ ಎಂದರು.</p>.<p>‘ಪಕ್ಷದೊಳಗೆ ಭಿನ್ನಾಭಿಪ್ರಾಯ ಸಹಜ. ನಾನು ಯಾವುದೇ ಬಣದ ಜೊತೆ ಗುರುತಿಸಿಕೊಂಡಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಿ ಭಿನ್ನಾಭಿಪ್ರಾಯ, ಗುಂಪುಗಾರಿಕೆ ಹೋಗಲಾಡಿಸುವೆ. 2028ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವಂತೆ ಮಾಡುತ್ತೇನೆ’ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.</p>.<div><blockquote>ನಾನು ಈವರೆಗೆ ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷಕ್ಕಾಗಿ ಸುಮಾರು ವರ್ಷಗಳಿಂದ ಶ್ರಮಿಸಿದ್ದು ಸೇವೆಯನ್ನು ಗುರುತಿಸಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಲಿ ಎಂಬ ಬೇಡಿಕೆ ಮಾತ್ರ ಇಡುತ್ತಿದ್ದೇನೆ.</blockquote><span class="attribution"> ಬಿ.ಶ್ರೀರಾಮುಲು, ಬಿಜೆಪಿ ಮುಖಂಡ</span></div>.<p>‘ಬಸನಗೌಡ ಪಾಟೀಲ ಯತ್ನಾಳ ಕೂಡ ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇದು ಸಂತೋಷ ತಂದಿದೆ. ಯಡಿಯೂರಪ್ಪ ಅವರಿಂದ ನಾವೆಲ್ಲಾ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ, ಆಶೀರ್ವಾದ ಮಾಡಿ ಅವಕಾಶ ಮಾಡಿಕೊಟ್ಟರೆ ಮತ್ತಷ್ಟು ಸಂತೋಷವಾಗಲಿದೆ’ ಎಂದರು.</p>.<p><strong>‘ನನಗೆ ನಾಟಕ ಮಾಡಲು ಬರಲ್ಲ’ </strong></p><p>‘ನನಗೆ ನಾಟಕ ಮಾಡಲು ಬರುವುದಿಲ್ಲ. ಇದ್ದದ್ದನ್ನು ಇದ್ದಂತೆ ನೇರವಾಗಿ ಮಾತನಾಡುತ್ತೇನೆ. ಸತ್ಯ ಧರ್ಮದ ಮೇಲೆ ರಾಜಕೀಯ ಮಾಡುತ್ತಿರುವೆ’ ಎಂದು ಶ್ರೀರಾಮುಲು ಹೇಳಿದ್ದಾರೆ. </p><p>ಕೆಲವರು ಪ್ರಪಂಚವೇ ತಮ್ಮ ಕೈಯಲ್ಲಿದೆ ಎಂಬಂತೆ ಬಿಂಬಿಸಿಕೊಳ್ಳುತ್ತಿರುತ್ತಾರೆ. ನಾಟಕ ಮಾಡಿ ರಾಜಕೀಯ ಸ್ಥಾನಮಾನ ಗಿಟ್ಟಿಸಿಕೊಂಡಿರುತ್ತಾರೆ. ನಾನು ಕೈಯಲ್ಲಿ ಕೈಲಾಸ ತೋರಿಸುವುದಿಲ್ಲ. ನಾನು ಸೋತಿದ್ದರೂ ಜನ ನನ್ನ ಪರವಾಗಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>