ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಪ್ರಕರಣ; ಇಬ್ಬರಿಗೆ ಜೀವಾವಧಿ ಶಿಕ್ಷೆ

Published 12 ಸೆಪ್ಟೆಂಬರ್ 2023, 4:18 IST
Last Updated 12 ಸೆಪ್ಟೆಂಬರ್ 2023, 4:18 IST
ಅಕ್ಷರ ಗಾತ್ರ

ಮುಳಬಾಗಿಲು: ಕೊಲೆ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ಮತ್ತು ‌ರೆಡ್ದೆಮ್ಮ ಎಂಬುವರಿಗೆ ಕೋಲಾರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಶುಕ್ಲಾಕ್ಷ ಪಾಲನ್ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ತಲಾ ₹ 25 ಸಾವಿರ ದಂಡ ವಿಧಿಸಿ ನೊಂದವರಿಗೆ ₹ 50 ಸಾವಿರ ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ಪಬ್ಲಿಕ್‌ ಪ್ರಾಸಿಕ್ಯೂಟರ್‌ ನಿರ್ಮಲಾ ವಾದ ಮಂಡಿಸಿದ್ದರು.

ಏನಿದು ಪ್ರಕರಣ?‌: ತಾಲ್ಲೂಕಿನ ಎಚ್.ಬೈಯಪ್ಪನಹಳ್ಳಿ ಗ್ರಾಮದಲ್ಲಿ ‌‌2019ರ ಏಪ್ರಿಲ್ 25ರಂದು ಪವನ್‌ ಕಲ್ಯಾಣ್‌ ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ದ್ವಿಚಕ್ರ ವಾಹನವನ್ನು ಮನೆಯ ಪಕ್ಕದಲ್ಲಿ ನಿಲ್ಲಿಸಿದ್ದು, ಅದನ್ನು ಗೋವರ್ಧನ್ ಮತ್ತು ಚಂದನ್ ಪಂಕ್ಚರ್ ಮಾಡಿದ್ದಾರೆಂದು ಆರೋಪಿಸಿ ಜಗಳ ತೆಗೆದಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಬ್ಬಿಣದ ಕಂಬಿ ಹಾಗೂ ದೊಣ್ಣೆಯಿಂದ ಗೋವರ್ಧನ್ ಅವರ ಬಲಗಣ್ಣಿಗೆ ತಿವಿದು ತಲೆಗೆ ಹೊಡೆದು ಕೊಲೆ ಮಾಡಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ನಂಗಲಿ ಪೊಲೀಸರು ಆರೋಪಿತರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಮೊದಲ ಆರೋಪಿಯಾಗಿದ್ದು, ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT