ಮುಳಬಾಗಿಲು: ನಿವಾರ್ ಚಂಡಮಾರುತದ ಪರಿಣಾಮ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಸ್ತಬ್ಧಗೊಂಡಿತು. ಸಾರ್ವಜನಿಕರು ಮನೆಯಿಂದ ಹೊರಬರಲು ಸಾಧ್ಯವಾಗದಷ್ಟು ಮಳೆ ಸುರಿಯಿತು.
ತಾಲ್ಲೂಕಿನ ತಾಯಲೂರು ಹೋಬಳಿಯ ಅಪ್ಪೆನಹಳ್ಳಿಯಲ್ಲಿ ಭಾಗ್ಯಮ್ಮ ಎಂಬುವರ ಮನೆ ಮಳೆಯ ರಭಸಕ್ಕೆ ಬಿದ್ದು ಹೋಗಿದೆ. ತಹಶೀಲ್ದಾರ್ ಕೆ.ಎನ್. ರಾಜಶೇಖರ್, ರಾಜಸ್ವ ನಿರೀಕ್ಷಕ ಸಿ. ಸುಬ್ರಮಣಿ ಒಳಗೊಂಡಂತೆ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಮನೆ ಬಿದ್ದ ಗ್ರಾಮಗಳಿಗೆ ತೆರಳಿ ಪರಿಶೀಲಿಸಿತು.