‘ಸಂಸದರು, ಶಾಸಕರು ಅಥವಾ ಜನಪ್ರತಿನಿಧಿಗಳಿಗೆ ಕರೆ ಮಾಡಿ ಭಯಪಡಿಸುವುದು ಈ ಕಾಲದಲ್ಲಿ ಸಾಧ್ಯವಿಲ್ಲ. ಇದನ್ನು ಮಟ್ಟ ಹಾಕುತ್ತೇವೆ. ಈ ರೀತಿ ಭಯೋತ್ಪಾದನೆ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ. ಎಲ್ಲಿಂದ ಮತ್ತು ಹೇಗೆ ಬೆದರಿಕೆ ಕರೆ ಬಂದಿವೆ ಎಂಬುದನ್ನು ಪತ್ತೆ ಹಚ್ಚುತ್ತೇವೆ. ಇಂತಹ ದುಷ್ಕೃತ್ಯಗಳ ವಿರುದ್ಧ ನಮ್ಮ ಪೊಲೀಸ್ ಅಧಿಕಾರಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಈ ರೀತಿಯ ಕಳಂಕಗಳನ್ನು ಸರಿಪಡಿಸುತ್ತೇವೆ’ ಎಂದು ತಿಳಿಸಿದರು.