<p><strong>ಕೋಲಾರ: </strong>‘ಜಿಲ್ಲಾ ಕೇಂದ್ರದ ಕ್ಲಾಕ್ಟವರ್ನಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ವಿಚಾರವಾಗಿ ಸಂಸದ ಎಸ್.ಮುನಿಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಾಣ ಬೆದರಿಕೆ ಕರೆ ಬಂದಿದೆ. ಈ ರೀತಿ ಬೆದರಿಕೆ ಹಾಕಿರುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕ್ಲಾಕ್ಟವರ್ನಲ್ಲಿ ಧ್ವಜಾರೋಹಣವಾದ ನಂತರ ಜೀವ ಬೆದರಿಕೆ ಕರೆ ಬಂದಿರುವ ಸಂಗತಿಯನ್ನು ಸಂಸದರು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದೇನೆ’ ಎಂದರು.</p>.<p><a href="https://www.prajavani.net/karnataka-news/russia-ukraine-war-naveen-body-is-expected-to-arrive-in-bangalore-on-monday-921133.html" itemprop="url">ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಆಗಮಿಸಲಿದೆ ನವೀನ್ ಮೃತದೇಹ </a></p>.<p>‘ಸಂಸದರು, ಶಾಸಕರು ಅಥವಾ ಜನಪ್ರತಿನಿಧಿಗಳಿಗೆ ಕರೆ ಮಾಡಿ ಭಯಪಡಿಸುವುದು ಈ ಕಾಲದಲ್ಲಿ ಸಾಧ್ಯವಿಲ್ಲ. ಇದನ್ನು ಮಟ್ಟ ಹಾಕುತ್ತೇವೆ. ಈ ರೀತಿ ಭಯೋತ್ಪಾದನೆ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ. ಎಲ್ಲಿಂದ ಮತ್ತು ಹೇಗೆ ಬೆದರಿಕೆ ಕರೆ ಬಂದಿವೆ ಎಂಬುದನ್ನು ಪತ್ತೆ ಹಚ್ಚುತ್ತೇವೆ. ಇಂತಹ ದುಷ್ಕೃತ್ಯಗಳ ವಿರುದ್ಧ ನಮ್ಮ ಪೊಲೀಸ್ ಅಧಿಕಾರಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಈ ರೀತಿಯ ಕಳಂಕಗಳನ್ನು ಸರಿಪಡಿಸುತ್ತೇವೆ’ ಎಂದು ತಿಳಿಸಿದರು.</p>.<p>‘ಪೊಲೀಸರು, ಸಂಸದರಿಗೆ ಮತ್ತು ಅವರು ಕುಟುಂಬ ಸದಸ್ಯರಿಗೆ ರಕ್ಷಣೆ ಕೊಡುತ್ತಾರೆ. ಜನಪ್ರತಿನಿಧಿಗಳ ಪ್ರಾಣ ತೆಗೆಯುವ ಮಟ್ಟಿಗೆ ಭಯೋತ್ಪಾದನೆ ನಡೆಯುತ್ತದೆ ಎಂದರೆ ನಮ್ಮಲ್ಲಿ ಪೊಲೀಸ್ ವ್ಯವಸ್ಥೆ ಇದೆ ಎಂಬುದನ್ನು ಅವರಿಗೆ ತೋರಿಸುತ್ತೇವೆ’ ಎಂದು ಗುಡುಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಜಿಲ್ಲಾ ಕೇಂದ್ರದ ಕ್ಲಾಕ್ಟವರ್ನಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ವಿಚಾರವಾಗಿ ಸಂಸದ ಎಸ್.ಮುನಿಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಾಣ ಬೆದರಿಕೆ ಕರೆ ಬಂದಿದೆ. ಈ ರೀತಿ ಬೆದರಿಕೆ ಹಾಕಿರುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕ್ಲಾಕ್ಟವರ್ನಲ್ಲಿ ಧ್ವಜಾರೋಹಣವಾದ ನಂತರ ಜೀವ ಬೆದರಿಕೆ ಕರೆ ಬಂದಿರುವ ಸಂಗತಿಯನ್ನು ಸಂಸದರು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದೇನೆ’ ಎಂದರು.</p>.<p><a href="https://www.prajavani.net/karnataka-news/russia-ukraine-war-naveen-body-is-expected-to-arrive-in-bangalore-on-monday-921133.html" itemprop="url">ಸೋಮವಾರ ನಸುಕಿನಲ್ಲಿ ಬೆಂಗಳೂರಿಗೆ ಆಗಮಿಸಲಿದೆ ನವೀನ್ ಮೃತದೇಹ </a></p>.<p>‘ಸಂಸದರು, ಶಾಸಕರು ಅಥವಾ ಜನಪ್ರತಿನಿಧಿಗಳಿಗೆ ಕರೆ ಮಾಡಿ ಭಯಪಡಿಸುವುದು ಈ ಕಾಲದಲ್ಲಿ ಸಾಧ್ಯವಿಲ್ಲ. ಇದನ್ನು ಮಟ್ಟ ಹಾಕುತ್ತೇವೆ. ಈ ರೀತಿ ಭಯೋತ್ಪಾದನೆ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ. ಎಲ್ಲಿಂದ ಮತ್ತು ಹೇಗೆ ಬೆದರಿಕೆ ಕರೆ ಬಂದಿವೆ ಎಂಬುದನ್ನು ಪತ್ತೆ ಹಚ್ಚುತ್ತೇವೆ. ಇಂತಹ ದುಷ್ಕೃತ್ಯಗಳ ವಿರುದ್ಧ ನಮ್ಮ ಪೊಲೀಸ್ ಅಧಿಕಾರಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಈ ರೀತಿಯ ಕಳಂಕಗಳನ್ನು ಸರಿಪಡಿಸುತ್ತೇವೆ’ ಎಂದು ತಿಳಿಸಿದರು.</p>.<p>‘ಪೊಲೀಸರು, ಸಂಸದರಿಗೆ ಮತ್ತು ಅವರು ಕುಟುಂಬ ಸದಸ್ಯರಿಗೆ ರಕ್ಷಣೆ ಕೊಡುತ್ತಾರೆ. ಜನಪ್ರತಿನಿಧಿಗಳ ಪ್ರಾಣ ತೆಗೆಯುವ ಮಟ್ಟಿಗೆ ಭಯೋತ್ಪಾದನೆ ನಡೆಯುತ್ತದೆ ಎಂದರೆ ನಮ್ಮಲ್ಲಿ ಪೊಲೀಸ್ ವ್ಯವಸ್ಥೆ ಇದೆ ಎಂಬುದನ್ನು ಅವರಿಗೆ ತೋರಿಸುತ್ತೇವೆ’ ಎಂದು ಗುಡುಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>