ರಾಜ್ಯದಲ್ಲಿ ಮೊದಲ ಬಾರಿಗೆ ಬುಡಕಟ್ಟು ಮಹಿಳೆಗೆ ಘೋಷಣೆಯಾಗಿದ್ದ ಟಿಕೆಟ್ ರದ್ದುಗೊಳಿಸಿ ಬೇರೊಬ್ಬರಿಗೆ ನೀಡುವ ಮೂಲಕ ಅನ್ಯಾಯ ಮಾಡಲಾಗಿದೆ ಎಂದು ಪುಷ್ಪಾ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ಹೈಕಮಾಂಡ್, ಸದ್ಯಕ್ಕೆ ‘ಬಿ’ ಫಾರಂ ತಡೆಹಿಡಿಯುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸೂಚಿಸಿದೆ ಎನ್ನಲಾಗಿದೆ.