<p><strong>ಕೋಲಾರ: </strong>ಲಾಕ್ಡೌನ್ ಕಾರಣಕ್ಕೆ 73 ದಿನಗಳಿಂದ ಬಂದ್ ಆಗಿದ್ದ ಜಿಲ್ಲೆಯ ದೇವಾಲಯಗಳಲ್ಲಿ ಸೋಮವಾರದಿಂದ ಪೂಜೆ ಆರಂಭವಾಗಿದ್ದು, ಭಕ್ತರ ದಂಡೇ ಹರಿದುಬಂದಿತು.</p>.<p>ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಭಕ್ತರು ತೀರ್ಥ ಪ್ರಸಾದವಿಲ್ಲದೆ ಮಂಗಳಾರತಿ, ಕುಂಕುಮ, ವಿಭೂತಿ ಪ್ರಸಾದ ಪಡೆದು ಕೃತಾರ್ಥರಾದರು.</p>.<p>ನಗರದ ಕೆಇಬಿ ಗಣಪತಿ ದೇವಾಲಯ, ನಂಜುಂಡೇಶ್ವರ, ವೆಂಕಟರಮಣಸ್ವಾಮಿ, ಪಂಚಮುಖಿ ಹನುಮ, ಶನೇಶ್ವರಸ್ವಾಮಿ, ಕಿಲಾರಿಪೇಟೆಯ ವೇಣುಗೋಪಾಲಸ್ವಾಮಿ, ಸತ್ಯಮ್ಮದೇವಿ, ಕೊಂಡರಾಜನಹಳ್ಳಿಯ ಆಂಜನೇಯ, ಸೀತಿ ಬೆಟ್ಟದ ಶ್ರೀಪತೇಶ್ವರಸ್ವಾಮಿ ದೇವಾಲಯ ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಪ್ರತಿನಿತ್ಯದಂತೆ ಪೂಜಾ ಕೈಂಕರ್ಯ ನೆರವೇರಿತು.</p>.<p>ದೇವಾಲಯಗಳ ಆಡಳಿತ ಮಂಡಳಿಯು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ದೇವಾಲಯಗಳ ಆವರಣದಲ್ಲಿ ಚೌಕಾಕಾರದಲ್ಲಿ ಮತ್ತು ವೃತ್ತಾಕಾರದಲ್ಲಿ ಪಟ್ಟಿ ಹಾಕಿತ್ತು. ಜತೆಗೆ ಭಕ್ತರಿಗೆ ಕೈ ಸ್ವಚ್ಛ ಮಾಡಿಕೊಳ್ಳಲು ಪ್ರವೇಶ ಭಾಗದಲ್ಲೇ ಸ್ಯಾನಿಟೈಸರ್ನ ವ್ಯವಸ್ಥೆ ಮಾಡಲಾಗಿತ್ತು.</p>.<p>ದೇವಾಲಯಗಳಿಗೆ ಬರುವ ಭಕ್ತರಿಗೆ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳ ಬಿಡಲಾಯಿತು. ಮಾಸ್ಕ್ ಧರಿಸಿ ಬಂದಿದ್ದ ಭಕ್ತರು ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆದರು. ಸಣ್ಣಪುಟ್ಟ ದೇವಾಲಯಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇಲ್ಲದಿದ್ದರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಂಡುಬಂತು.</p>.<p>ವಿಶೇಷ ಪೂಜೆ: ‘ಸರ್ಕಾರದ ಸುರಕ್ಷತಾ ಮಾರ್ಗಸೂಚಿ ಪಾಲಿಸಿದ್ದೇವೆ. ಭಕ್ತರು ಅಂತರ ಕಾಯ್ದುಕೊಳ್ಳಲು ಎಚ್ಚರಿಕೆ ವಹಿಸಿದ್ದೇವೆ. ಮೊದಲ ದಿನವಾಗಿದ್ದರೂ 200ಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದರು’ ಎಂದು ಕೆಇಬಿ ಗಣಪತಿ ದೇವಾಲಯದ ಪ್ರಧಾನ ಅರ್ಚಕ ಅಪ್ಪಣ್ಣಶಾಸ್ತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೆಇಬಿ ಗಣಪತಿ ದೇವಾಲಯದಲ್ಲಿ ಸಂಕಷ್ಟ ಚತುರ್ಥಿ ಅಂಗವಾಗಿ ಮಂಗಳವಾರ ವಿಶೇಷ ಪೂಜೆಯಿದ್ದು, ಕಾರಣ ಭಕ್ತರು ಸೋಮವಾರವೇ ದೇವಾಲಯಕ್ಕೆ ಬಂದು ಹೆಸರು ನೊಂದಾಯಿಸುತ್ತಿದ್ದ ದೃಶ್ಯ ಕಂಡುಬಂತು.</p>.<p>ದರ್ಶನ ಭಾಗ್ಯವಿಲ್ಲ: ನಗರದ ಕೋಟೆ ಭಾಗದಲ್ಲಿ ಕೊರೊನಾ ಸೋಂಕಿತ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಡೀ ಬಡಾವಣೆ ಸೀಲ್ಡೌನ್ ಆಗಿದೆ. ಹೀಗಾಗಿ ಈ ಬಡಾವಣೆಯಲ್ಲಿ ಇತಿಹಾಸ ಪ್ರಸಿದ್ಧ ಕೋಲಾರಮ್ಮ ಹಾಗೂ ಸೋಮೇಶ್ವರಸ್ವಾಮಿ ದೇವಾಲಯಗಳನ್ನು ಸೋಮವಾರ ತೆರೆಯಲಿಲ್ಲ. ಇದರಿಂದ ಭಕ್ತರಿಗೆ ನಗರ ದೇವತೆಯ ದರ್ಶನ ಭಾಗ್ಯ ದೊರೆಯಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಲಾಕ್ಡೌನ್ ಕಾರಣಕ್ಕೆ 73 ದಿನಗಳಿಂದ ಬಂದ್ ಆಗಿದ್ದ ಜಿಲ್ಲೆಯ ದೇವಾಲಯಗಳಲ್ಲಿ ಸೋಮವಾರದಿಂದ ಪೂಜೆ ಆರಂಭವಾಗಿದ್ದು, ಭಕ್ತರ ದಂಡೇ ಹರಿದುಬಂದಿತು.</p>.<p>ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಭಕ್ತರು ತೀರ್ಥ ಪ್ರಸಾದವಿಲ್ಲದೆ ಮಂಗಳಾರತಿ, ಕುಂಕುಮ, ವಿಭೂತಿ ಪ್ರಸಾದ ಪಡೆದು ಕೃತಾರ್ಥರಾದರು.</p>.<p>ನಗರದ ಕೆಇಬಿ ಗಣಪತಿ ದೇವಾಲಯ, ನಂಜುಂಡೇಶ್ವರ, ವೆಂಕಟರಮಣಸ್ವಾಮಿ, ಪಂಚಮುಖಿ ಹನುಮ, ಶನೇಶ್ವರಸ್ವಾಮಿ, ಕಿಲಾರಿಪೇಟೆಯ ವೇಣುಗೋಪಾಲಸ್ವಾಮಿ, ಸತ್ಯಮ್ಮದೇವಿ, ಕೊಂಡರಾಜನಹಳ್ಳಿಯ ಆಂಜನೇಯ, ಸೀತಿ ಬೆಟ್ಟದ ಶ್ರೀಪತೇಶ್ವರಸ್ವಾಮಿ ದೇವಾಲಯ ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ಪ್ರತಿನಿತ್ಯದಂತೆ ಪೂಜಾ ಕೈಂಕರ್ಯ ನೆರವೇರಿತು.</p>.<p>ದೇವಾಲಯಗಳ ಆಡಳಿತ ಮಂಡಳಿಯು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರಿಗೆ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ದೇವಾಲಯಗಳ ಆವರಣದಲ್ಲಿ ಚೌಕಾಕಾರದಲ್ಲಿ ಮತ್ತು ವೃತ್ತಾಕಾರದಲ್ಲಿ ಪಟ್ಟಿ ಹಾಕಿತ್ತು. ಜತೆಗೆ ಭಕ್ತರಿಗೆ ಕೈ ಸ್ವಚ್ಛ ಮಾಡಿಕೊಳ್ಳಲು ಪ್ರವೇಶ ಭಾಗದಲ್ಲೇ ಸ್ಯಾನಿಟೈಸರ್ನ ವ್ಯವಸ್ಥೆ ಮಾಡಲಾಗಿತ್ತು.</p>.<p>ದೇವಾಲಯಗಳಿಗೆ ಬರುವ ಭಕ್ತರಿಗೆ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳ ಬಿಡಲಾಯಿತು. ಮಾಸ್ಕ್ ಧರಿಸಿ ಬಂದಿದ್ದ ಭಕ್ತರು ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆದರು. ಸಣ್ಣಪುಟ್ಟ ದೇವಾಲಯಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇಲ್ಲದಿದ್ದರೂ ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಂಡುಬಂತು.</p>.<p>ವಿಶೇಷ ಪೂಜೆ: ‘ಸರ್ಕಾರದ ಸುರಕ್ಷತಾ ಮಾರ್ಗಸೂಚಿ ಪಾಲಿಸಿದ್ದೇವೆ. ಭಕ್ತರು ಅಂತರ ಕಾಯ್ದುಕೊಳ್ಳಲು ಎಚ್ಚರಿಕೆ ವಹಿಸಿದ್ದೇವೆ. ಮೊದಲ ದಿನವಾಗಿದ್ದರೂ 200ಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದರು’ ಎಂದು ಕೆಇಬಿ ಗಣಪತಿ ದೇವಾಲಯದ ಪ್ರಧಾನ ಅರ್ಚಕ ಅಪ್ಪಣ್ಣಶಾಸ್ತ್ರಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕೆಇಬಿ ಗಣಪತಿ ದೇವಾಲಯದಲ್ಲಿ ಸಂಕಷ್ಟ ಚತುರ್ಥಿ ಅಂಗವಾಗಿ ಮಂಗಳವಾರ ವಿಶೇಷ ಪೂಜೆಯಿದ್ದು, ಕಾರಣ ಭಕ್ತರು ಸೋಮವಾರವೇ ದೇವಾಲಯಕ್ಕೆ ಬಂದು ಹೆಸರು ನೊಂದಾಯಿಸುತ್ತಿದ್ದ ದೃಶ್ಯ ಕಂಡುಬಂತು.</p>.<p>ದರ್ಶನ ಭಾಗ್ಯವಿಲ್ಲ: ನಗರದ ಕೋಟೆ ಭಾಗದಲ್ಲಿ ಕೊರೊನಾ ಸೋಂಕಿತ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಡೀ ಬಡಾವಣೆ ಸೀಲ್ಡೌನ್ ಆಗಿದೆ. ಹೀಗಾಗಿ ಈ ಬಡಾವಣೆಯಲ್ಲಿ ಇತಿಹಾಸ ಪ್ರಸಿದ್ಧ ಕೋಲಾರಮ್ಮ ಹಾಗೂ ಸೋಮೇಶ್ವರಸ್ವಾಮಿ ದೇವಾಲಯಗಳನ್ನು ಸೋಮವಾರ ತೆರೆಯಲಿಲ್ಲ. ಇದರಿಂದ ಭಕ್ತರಿಗೆ ನಗರ ದೇವತೆಯ ದರ್ಶನ ಭಾಗ್ಯ ದೊರೆಯಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>