<p><strong>ಕೋಲಾರ:</strong> ‘ಬಿಜೆಪಿ ಸರ್ಕಾರ ಪ್ರತಿ ಪಕ್ಷಗಳೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಹೆಚ್ಚು ಮಂದಿ ಕೊರೊನಾ ಸೋಂಕಿನ ಬದಲಿಗೆ ಹಸಿವಿನಿಂದ ಸಾವನ್ನಪ್ಪಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದರು.</p>.<p>ರಂಜಾನ್ ಪ್ರಯುಕ್ತ ಇಲ್ಲಿ ಶುಕ್ರವಾರ ಮುಸ್ಲಿಂ ಸಮುದಾಯದವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ‘ಪ್ರಧಾನಿ ಮೋದಿ ಜನರನ್ನು ಮರಳು ಮಾಡುವುದರಲ್ಲಿ ನಿಸ್ಸೀಮರು. ಸಿನಿಮಾ ನಟರಿಗಿಂತಲೂ ಚೆನ್ನಾಗಿ ಅಭಿನಯಿಸುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಮೋದಿ ಚುನಾವಣೆ ವೇಳೆ ಪುಲ್ವಾಮಾ ಪಿಕ್ಚರ್ ತೋರಿಸಿದರು. ಆದರೆ, ಅದರಲ್ಲಿ ಪಾಕಿಸ್ತಾನಿ ಸೈನಿಕರನ್ನಾಗಲಿ ಅಥವಾ ಭಯೋತ್ಪಾದಕರನ್ನಾಗಲಿ ಸಾಯಿಸಿದ ಚಿತ್ರಣವೇ ಇರಲಿಲ್ಲ’ ಎಂದು ಲೇವಡಿ ಮಾಡಿದರು.</p>.<p>‘ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ₹ 68 ಸಾವಿರ ಕೋಟಿ ಮನ್ನಾ ಮಾಡಿದೆಯೇ ಹೊರತು ಬಡ ರೈತರ ಕೃಷಿ ಸಾಲ, ಬಡ್ಡಿ ಮನ್ನಾ ಮಾಡಿಲ್ಲ. ಮೋದಿಯವರು ಜನ್ಧನ್ ಯೋಜನೆಯಲ್ಲಿ ಮಹಿಳೆಯರ ಖಾತೆಗೆ ₹ 500 ಜಮೆ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ನೆರವು ನೀಡಲ್ಲ. ಕೊರೊನಾ ವಿಚಾರದಲ್ಲಿ ಎನ್ಜಿಒಗಳಿಗೆ ಇರುವಷ್ಟು ಕಾಳಜಿಯೂ ಬಿಜೆಪಿಗಿಲ್ಲ’ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಕುಟುಕಿದರು.</p>.<p>‘ದೇಶದ 130 ಕೋಟಿ ಜನರ ಪೈಕಿ ಕನಿಷ್ಠ 20 ಲಕ್ಷ ಮಂದಿಗೂ ಕೊರೊನಾ ಸೋಂಕಿನ ಪರೀಕ್ಷೆಯನ್ನು ಸಮರ್ಪಕವಾಗಿ ಮಾಡಿಲ್ಲ. ದೇಶದಲ್ಲಿ ಎಲ್ಲರಿಗೂ ವೈದ್ಯಕೀಯ ಪರೀಕ್ಷೆ ಮಾಡಿದರೆ 10 ಲಕ್ಷಕ್ಕೂ ಹೆಚ್ಚು ಕೊರೊನಾ ಸೊಂಕಿತರು ಪತ್ತೆಯಾಗುತ್ತಾರೆ’ ಎಂದರು.</p>.<p><strong>ಕೋಮು ರಾಜಕಾರಣ:</strong> ‘ಮೋದಿಯವರು ಹಿಂದೂ, -ಮುಸ್ಲಿಂ ಎಂದು ಕೋಮುವಾದ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಾ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಆಟ ಹೆಚ್ಚು ದಿನ ನಡೆಯಲ್ಲ’ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>‘ಮೋದಿ ₹ 20 ಲಕ್ಷ ಕೋಟಿ ಪ್ಯಾಕೇಜ್ನ ಸುಳ್ಳಿನ ಕಂತೆಯ ಬುರುಡೆ ಬಿಟ್ಟಿದ್ದಾರೆ. ಅದರಲ್ಲಿ ಬಜೆಟ್ನದೇ ₹ 16 ಲಕ್ಷ ಕೋಟಿಯಿದೆ. ಮೋದಿಯವರು ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ, ಸ್ವಿಸ್ ಬ್ಯಾಂಕ್ನಲ್ಲಿರುವ ಕಪ್ಪು ಹಣ ತಂದು ಜನರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತೇನೆ ಎಂದು ಚುನಾವಣೆ ಪೂರ್ವದಲ್ಲಿ ಹೇಳಿದ್ದರು. ಅಧಿಕಾರಕ್ಕೆ ಬಂದ ನಂತರ ಆ ಮಾತುಗಳೆಲ್ಲಾ ಅವರಿಗೆ ಮರೆತು ಹೋಗಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ವ್ಯಂಗವಾಡಿದರು.</p>.<p>ಕೆಪಿಸಿಸಿ ವಕ್ತಾರೆ ವಸಂತ ಕವಿತಾರೆಡ್ಡಿ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಮಾಜಿ ಸಚಿವ ನಿಸಾರ್ ಅಹಮ್ಮದ್, ಅಂಜುಮಾನ್ ಇಸ್ಲಾಮಿಯಾ ಸಂಘಟನೆ ಜಿಲ್ಲಾ ಅಧ್ಯಕ್ಷ ಜಮೀರ್ ಅಹಮ್ಮದ್, ನಗರಸಭೆ ಸದಸ್ಯ ಬಿ.ಎಂ.ಮುಬಾರಕ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಬಿಜೆಪಿ ಸರ್ಕಾರ ಪ್ರತಿ ಪಕ್ಷಗಳೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಹೆಚ್ಚು ಮಂದಿ ಕೊರೊನಾ ಸೋಂಕಿನ ಬದಲಿಗೆ ಹಸಿವಿನಿಂದ ಸಾವನ್ನಪ್ಪಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಟೀಕಿಸಿದರು.</p>.<p>ರಂಜಾನ್ ಪ್ರಯುಕ್ತ ಇಲ್ಲಿ ಶುಕ್ರವಾರ ಮುಸ್ಲಿಂ ಸಮುದಾಯದವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ‘ಪ್ರಧಾನಿ ಮೋದಿ ಜನರನ್ನು ಮರಳು ಮಾಡುವುದರಲ್ಲಿ ನಿಸ್ಸೀಮರು. ಸಿನಿಮಾ ನಟರಿಗಿಂತಲೂ ಚೆನ್ನಾಗಿ ಅಭಿನಯಿಸುತ್ತಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಮೋದಿ ಚುನಾವಣೆ ವೇಳೆ ಪುಲ್ವಾಮಾ ಪಿಕ್ಚರ್ ತೋರಿಸಿದರು. ಆದರೆ, ಅದರಲ್ಲಿ ಪಾಕಿಸ್ತಾನಿ ಸೈನಿಕರನ್ನಾಗಲಿ ಅಥವಾ ಭಯೋತ್ಪಾದಕರನ್ನಾಗಲಿ ಸಾಯಿಸಿದ ಚಿತ್ರಣವೇ ಇರಲಿಲ್ಲ’ ಎಂದು ಲೇವಡಿ ಮಾಡಿದರು.</p>.<p>‘ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ₹ 68 ಸಾವಿರ ಕೋಟಿ ಮನ್ನಾ ಮಾಡಿದೆಯೇ ಹೊರತು ಬಡ ರೈತರ ಕೃಷಿ ಸಾಲ, ಬಡ್ಡಿ ಮನ್ನಾ ಮಾಡಿಲ್ಲ. ಮೋದಿಯವರು ಜನ್ಧನ್ ಯೋಜನೆಯಲ್ಲಿ ಮಹಿಳೆಯರ ಖಾತೆಗೆ ₹ 500 ಜಮೆ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ನೆರವು ನೀಡಲ್ಲ. ಕೊರೊನಾ ವಿಚಾರದಲ್ಲಿ ಎನ್ಜಿಒಗಳಿಗೆ ಇರುವಷ್ಟು ಕಾಳಜಿಯೂ ಬಿಜೆಪಿಗಿಲ್ಲ’ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಕುಟುಕಿದರು.</p>.<p>‘ದೇಶದ 130 ಕೋಟಿ ಜನರ ಪೈಕಿ ಕನಿಷ್ಠ 20 ಲಕ್ಷ ಮಂದಿಗೂ ಕೊರೊನಾ ಸೋಂಕಿನ ಪರೀಕ್ಷೆಯನ್ನು ಸಮರ್ಪಕವಾಗಿ ಮಾಡಿಲ್ಲ. ದೇಶದಲ್ಲಿ ಎಲ್ಲರಿಗೂ ವೈದ್ಯಕೀಯ ಪರೀಕ್ಷೆ ಮಾಡಿದರೆ 10 ಲಕ್ಷಕ್ಕೂ ಹೆಚ್ಚು ಕೊರೊನಾ ಸೊಂಕಿತರು ಪತ್ತೆಯಾಗುತ್ತಾರೆ’ ಎಂದರು.</p>.<p><strong>ಕೋಮು ರಾಜಕಾರಣ:</strong> ‘ಮೋದಿಯವರು ಹಿಂದೂ, -ಮುಸ್ಲಿಂ ಎಂದು ಕೋಮುವಾದ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಾ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಆಟ ಹೆಚ್ಚು ದಿನ ನಡೆಯಲ್ಲ’ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.</p>.<p>‘ಮೋದಿ ₹ 20 ಲಕ್ಷ ಕೋಟಿ ಪ್ಯಾಕೇಜ್ನ ಸುಳ್ಳಿನ ಕಂತೆಯ ಬುರುಡೆ ಬಿಟ್ಟಿದ್ದಾರೆ. ಅದರಲ್ಲಿ ಬಜೆಟ್ನದೇ ₹ 16 ಲಕ್ಷ ಕೋಟಿಯಿದೆ. ಮೋದಿಯವರು ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ, ಸ್ವಿಸ್ ಬ್ಯಾಂಕ್ನಲ್ಲಿರುವ ಕಪ್ಪು ಹಣ ತಂದು ಜನರ ಬ್ಯಾಂಕ್ ಖಾತೆಗೆ ಜಮೆ ಮಾಡುತ್ತೇನೆ ಎಂದು ಚುನಾವಣೆ ಪೂರ್ವದಲ್ಲಿ ಹೇಳಿದ್ದರು. ಅಧಿಕಾರಕ್ಕೆ ಬಂದ ನಂತರ ಆ ಮಾತುಗಳೆಲ್ಲಾ ಅವರಿಗೆ ಮರೆತು ಹೋಗಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ವ್ಯಂಗವಾಡಿದರು.</p>.<p>ಕೆಪಿಸಿಸಿ ವಕ್ತಾರೆ ವಸಂತ ಕವಿತಾರೆಡ್ಡಿ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಮಾಜಿ ಸಚಿವ ನಿಸಾರ್ ಅಹಮ್ಮದ್, ಅಂಜುಮಾನ್ ಇಸ್ಲಾಮಿಯಾ ಸಂಘಟನೆ ಜಿಲ್ಲಾ ಅಧ್ಯಕ್ಷ ಜಮೀರ್ ಅಹಮ್ಮದ್, ನಗರಸಭೆ ಸದಸ್ಯ ಬಿ.ಎಂ.ಮುಬಾರಕ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>