<p><strong>ಕೋಲಾರ</strong>: ‘ಜಿಲ್ಲೆಯಲ್ಲಿ 41,794 ಪ್ರಕರಣಗಳ ಪೈಕಿ 28,482 ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ರಾಜಿ ಮಾಡಿಸಲು ಗುರುತಿಸಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್.ರಘುನಾಥ್ ತಿಳಿಸಿದರು.</p>.<p>ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈಗಾಗಲೇ ಸುಮಾರು 4,500 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಇತ್ಯರ್ಥವಾಗಿವೆ. ಜಿಲ್ಲೆಯಲ್ಲಿ ಲೋಕ ಅದಾಲತ್ ಯಶಸ್ವಿಯಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘400 ಸಿವಿಲ್ ಪ್ರಕರಣ, 500 ಕ್ರಿಮಿನಲ್ ಪ್ರಕರಣ ಹಾಗೂ 40 ಮೋಟಾರು ಪ್ರಕರಣಗಳಲ್ಲಿ ₹ 1.17 ಕೋಟಿಯನ್ನು ವಿಮಾ ಕಂಪನಿಗಳಿಂದ ಕೊಡಿಸಲಾಗಿದೆ. ಚೆಕ್ಬೌನ್ಸ್ ಪ್ರಕರಣಗಳನ್ನು ಸಹ ಇತ್ಯರ್ಥಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಕಾಯ್ದೆಯಡಿ ಬರುವ ಸಣ್ಣ ಪುಟ್ಟ 2,800 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಹಣ ವಸೂಲಿ, ಬ್ಯಾಂಕ್, ವಿದ್ಯುತ್, ವೈವಾಹಿಕ ಪ್ರಕರಣಗಳು ಹಾಗೂ 50 ಮರಳು ದಂಧೆ ಪ್ರಕರಣಗಳಲ್ಲಿ ₹ 33 ಲಕ್ಷ ದಂಡ ವಿಧಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಲೋಕ ಅದಾಲತ್ಗೆ ಜಿಲ್ಲಾಡಳಿತದ ಅಧಿಕಾರಿಗಳು, ಸ್ಥಳೀಯ ವಕೀಲರ ಸಂಘ, ತಾಲ್ಲೂಕುಗಳ ವಕೀಲರ ಸಂಘ, ಗಣಿ ಇಲಾಖೆ, ವಿಮಾ ಕಂಪನಿ ಅಧಿಕಾರಿಗಳು, ಕಂಪನಿಯ ವಕೀಲರು, ತಾಲ್ಲೂಕು ನ್ಯಾಯಾಧೀಶರು ಹಾಗೂ ನ್ಯಾಯಾಲಯ ಸಿಬ್ಬಂದಿ ಸಹಕಾರ ನೀಡಿದ್ದಾರೆ’ ಎಂದು ಸ್ಮರಿಸಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀಧರ್, ವಕೀಲ ವಿ.ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಜಿಲ್ಲೆಯಲ್ಲಿ 41,794 ಪ್ರಕರಣಗಳ ಪೈಕಿ 28,482 ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ರಾಜಿ ಮಾಡಿಸಲು ಗುರುತಿಸಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್.ರಘುನಾಥ್ ತಿಳಿಸಿದರು.</p>.<p>ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈಗಾಗಲೇ ಸುಮಾರು 4,500 ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಇತ್ಯರ್ಥವಾಗಿವೆ. ಜಿಲ್ಲೆಯಲ್ಲಿ ಲೋಕ ಅದಾಲತ್ ಯಶಸ್ವಿಯಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘400 ಸಿವಿಲ್ ಪ್ರಕರಣ, 500 ಕ್ರಿಮಿನಲ್ ಪ್ರಕರಣ ಹಾಗೂ 40 ಮೋಟಾರು ಪ್ರಕರಣಗಳಲ್ಲಿ ₹ 1.17 ಕೋಟಿಯನ್ನು ವಿಮಾ ಕಂಪನಿಗಳಿಂದ ಕೊಡಿಸಲಾಗಿದೆ. ಚೆಕ್ಬೌನ್ಸ್ ಪ್ರಕರಣಗಳನ್ನು ಸಹ ಇತ್ಯರ್ಥಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಕಾಯ್ದೆಯಡಿ ಬರುವ ಸಣ್ಣ ಪುಟ್ಟ 2,800 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಹಣ ವಸೂಲಿ, ಬ್ಯಾಂಕ್, ವಿದ್ಯುತ್, ವೈವಾಹಿಕ ಪ್ರಕರಣಗಳು ಹಾಗೂ 50 ಮರಳು ದಂಧೆ ಪ್ರಕರಣಗಳಲ್ಲಿ ₹ 33 ಲಕ್ಷ ದಂಡ ವಿಧಿಸಲಾಗಿದೆ’ ಎಂದು ವಿವರಿಸಿದರು.</p>.<p>‘ಲೋಕ ಅದಾಲತ್ಗೆ ಜಿಲ್ಲಾಡಳಿತದ ಅಧಿಕಾರಿಗಳು, ಸ್ಥಳೀಯ ವಕೀಲರ ಸಂಘ, ತಾಲ್ಲೂಕುಗಳ ವಕೀಲರ ಸಂಘ, ಗಣಿ ಇಲಾಖೆ, ವಿಮಾ ಕಂಪನಿ ಅಧಿಕಾರಿಗಳು, ಕಂಪನಿಯ ವಕೀಲರು, ತಾಲ್ಲೂಕು ನ್ಯಾಯಾಧೀಶರು ಹಾಗೂ ನ್ಯಾಯಾಲಯ ಸಿಬ್ಬಂದಿ ಸಹಕಾರ ನೀಡಿದ್ದಾರೆ’ ಎಂದು ಸ್ಮರಿಸಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀಧರ್, ವಕೀಲ ವಿ.ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>