ಕೋಲಾರ ಚಿಕ್ಕಬಳ್ಳಾಪುರ ಕ್ಷೇತ್ರ ಗೆಲ್ಲಿಸುವ ಜವಾಬ್ದಾರಿಯನ್ನು ಮೂವರು ಸಚಿವರಿಗೆ ನೀಡಲಾಗಿದೆ. ಮುಕ್ತ ಮನಸ್ಸಿನಿಂದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡುತ್ತೇನೆ. ಕರೆದಾಗ ಪ್ರಚಾರಕ್ಕೆ ಬರುತ್ತೇನೆ
ಕೆ.ಎಚ್.ಮುನಿಯಪ್ಪ ಸಚಿವ
4 ಬಾರಿ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು ನಮ್ಮಲ್ಲಿ ಗುಂಪುಗಾರಿಕೆ ಇಲ್ಲ. ಜಿಲ್ಲೆಯ ನಾಯಕರು ಅಭ್ಯರ್ಥಿ ಜೊತೆ ಹೋಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆ.ಎಚ್.ಮುನಿಯಪ್ಪ ಪ್ರಚಾರಕ್ಕೂ ಬರುತ್ತಾರೆ
ಬೈರತಿ ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವ
ನಾವೆಲ್ಲರೂ ಒಂದಾಗಿದ್ದೇವೆ. ಮುನಿಯಪ್ಪ ಸೇರಿ ಎಲ್ಲರಿಗೂ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿಯಿದೆ. ನನ್ನನ್ನು ನಾಮಪತ್ರ ಸಲ್ಲಿಕೆಗೆ ಬನ್ನಿ ಎಂದು ಯಾರೂ ಕರೆದಿಲ್ಲ. ಅವರನ್ನೂ ಕರೆದಿಲ್ಲ