ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಕ್ಷೇತ್ರ ಸಮೀಕ್ಷೆ | ಕಾಂಗ್ರೆಸ್‌ಗೇ ಜಯ: ಸಚಿವ ಬೈರತಿ ಸುರೇಶ್‌

Published 5 ಫೆಬ್ರುವರಿ 2024, 16:25 IST
Last Updated 5 ಫೆಬ್ರುವರಿ 2024, 16:25 IST
ಅಕ್ಷರ ಗಾತ್ರ

ಕೋಲಾರ: ‘ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದ್ದೇವೆ. ಈಗಾಗಲೇ ಸಮೀಕ್ಷೆ ನಡೆಸಿದ್ದು, ನಮ್ಮ ಅಭ್ಯರ್ಥಿಯೇ ಗೆಲುತ್ತಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಭರವಸೆ ವ್ಯಕ್ತಪಡಿಸಿದರು. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೊತ್ತೂರು ಮಂಜುನಾಥ್ ಕೋಲಾರದಲ್ಲಿ ಶಾಸಕರಾಗುತ್ತಾರೆ ಎನ್ನುವ ಕನಸು ಯಾರಿಗಾದರೂ ಬಂದಿತ್ತೇ? ಅವರು ಕ್ಷೇತ್ರದ ಒಡನಾಟ ಇಟ್ಟುಕೊಂಡಿದ್ದರು, ಹೈಕಮಾಂಡ್ ಸೂಚಿಸಿದ ತಕ್ಷಣ ಸ್ಪರ್ಧಿಸಿ ಗೆದ್ದರು. ಅದೇ ರೀತಿ ಕ್ಷೇತ್ರದ ಒಡನಾಟವಿರುವ ಅಭ್ಯರ್ಥಿಯನ್ನು ಕಣಕ್ಕಿಸಲಾಗುತ್ತದೆ. ಕಾಂಗ್ರೆಸ್ ಪಕ್ಷವು ಸಮುದ್ರವಿದ್ದಂತೆ. ಹೀಗಾಗಿ, ಆಕಾಂಕ್ಷಿಗಳು ಹೆಚ್ಚಾಗಿ ಇದ್ದಾರೆ’ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಬಿಜೆಪಿಯ ಡಾ.ಸುಧಾಕರ್ ಬಹಳ ದೊಡ್ಡ ನಾಯಕ. ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT