ಜೆಡಿಎಸ್ನಿಂದ ಸ್ಪರ್ಧೆಗೆ ಮುನಿಸ್ವಾಮಿ ಯತ್ನ?
ಬಿಜೆಪಿಯು ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದರೂ ಆ ಪಕ್ಷದಲ್ಲಿ ಅಭ್ಯರ್ಥಿ ಯಾರು ಎಂದು ಇನ್ನೂ ತೀರ್ಮಾನಿಸಿಲ್ಲ. ಹೀಗಾಗಿ ಕೊನೆಯ ಪ್ರಯತ್ನ ಎಂಬಂತೆ ಮುನಿಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಪ್ರಯತ್ನ ಮುಂದುವರಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಈ ನಿಟ್ಟಿನಲ್ಲಿ ಶನಿವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ‘ಆ ರೀತಿ ಆಲೋಚನೆ ನನಗಿಲ್ಲ. ನಾನೀಗ ಬಿಜೆಪಿ ಸಂಸದ. ಹೀಗಾಗಿ ಪಕ್ಷದ ತೀರ್ಮಾನಕ್ಕೆ ಬದ್ಧ’ ಎಂದಷ್ಟೇ ಅವರು ಪ್ರತಿಕ್ರಿಯಿಸಿದ್ದಾರೆ.