<p><strong>ಕೋಲಾರ:</strong> ರಾಜ್ಯದ ಐದು ಪರಿಶಿಷ್ಟ ಜಾತಿಯ ಲೋಕಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದಡಿ ಕೋಲಾರ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಸಚಿವ ಕೆ.ಎಚ್.ಮುನಿಯಪ್ಪ ಪಟ್ಟು ಹಿಡಿದಿದ್ದಾರೆ.</p>.<p>ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವರಿಕೆ ಮಾಡಿದ್ದು, ಕೋಲಾರ ಮೀಸಲು ಕ್ಷೇತ್ರದಲ್ಲಿ ತಮ್ಮ ಅಳಿಯ ಕೆ.ಜಿ.ಚಿಕ್ಕಪೆದ್ದಣ್ಣ ಅವರಿಗೆ ಬಹುತೇಕ ಟಿಕೆಟ್ ನಿಗದಿಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ. ಕೆ.ಎಚ್.ಮುನಿಯಪ್ಪ ಕೂಡ ಎಡಗೈ ಸಮುದಾಯಕ್ಕೆ ಸೇರಿದವರು.</p>.<p>‘ಕಾಂಗ್ರೆಸ್ನಲ್ಲಿ ಎರಡು ಕ್ಷೇತ್ರ ದಲಿತ ಬಲಗೈ, ಎರಡು ಕ್ಷೇತ್ರ ಎಡಗೈ ಹಾಗೂ ಒಂದು ಭೋವಿ ಅಥವಾ ಲಂಬಾಣಿ ಸಮುದಾಯಕ್ಕೆ ನೀಡುವುದು ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ಬಾರಿ ಮೂರು ಕ್ಷೇತ್ರಗಳಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಲಾಗುತ್ತಿದೆ. ಇನ್ನೆರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಅಭಿಪ್ರಾಯವಿದೆ’ ಎಂದು ಮಂಗಳವಾರಷ್ಟೇ ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿದ್ದರು.</p>.<p>ಈಗಾಗಲೇ ವಿಜಯಪುರ, ಕಲಬುರಗಿ ಕ್ಷೇತ್ರದಲ್ಲಿ ಬಲಗೈ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಚಾಮರಾಜನಗರದಲ್ಲೂ ಬಲಗೈ ಸಮುದಾಯಕ್ಕೆ (ಡಾ.ಎಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್) ಸಿಗುವ ಸಾಧ್ಯತೆ ಇದೆ. ಚಿತ್ರದುರ್ಗದಲ್ಲಿ ಎಡಗೈ ಸಮುದಾಯಕ್ಕೆ (ಬಿ.ಎನ್.ಚಂದ್ರಪ್ಪ) ಸಿಕ್ಕಿದ್ದು, 3 ಬಲ+2 ಎಡ ಲೆಕ್ಕಾಚಾರದಲ್ಲಿ ಕೋಲಾರದಲ್ಲೂ ಎಡಗೈ ಸಮುದಾಯಕ್ಕೆ ಸಿಗಬೇಕು ಎಂಬುದು ಅವರ ವಾದವಾಗಿದೆ.</p>.<p>ಈ ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದರೆ ಎಲ್ಲಾ 28 ಕ್ಷೇತ್ರಗಳಲ್ಲಿ ತೊಂದರೆ ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ರವಾನಿಸಿರುವುದು ಗೊತ್ತಾಗಿದೆ.</p>.<p>ಕೋಲಾರ ಕ್ಷೇತ್ರದ ಟಿಕೆಟ್ಗಾಗಿ ಹಕ್ಕೊತ್ತಾಯ ಮಾಡುತ್ತಿರುವ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಕೂಡ ಎಡಗೈ ಸಮುದಾಯದವರು.</p>.<p>ವಿಧಾನಸಭೆಯಿಂದ ರಾಜ್ಯಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮರು ಆಯ್ಕೆಗೆ ಅವಕಾಶ ನೀಡಿರಲಿಲ್ಲ. ಈ ಸಂಬಂಧ ಮಾದಿಗ ಸಮುದಾಯದ ಆಕ್ಷೇಪವೂ ವ್ಯಕ್ತವಾಗಿತ್ತು, ಈ ಹಿನ್ನೆಲೆಯಲ್ಲಿ ಅವರನ್ನು ಕಣಕ್ಕಿಳಿಸಲು ಚರ್ಚೆ ನಡೆದಿತ್ತು. ಈಚೆಗೆ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.</p>.<p>ಕೋಲಾರ ಕ್ಷೇತ್ರದಲ್ಲಿ ಸತತವಾಗಿ ಎಂಟು ಬಾರಿ ಸ್ಪರ್ಧಿಸಿರುವ ಕೆ.ಎಚ್.ಮುನಿಯಪ್ಪ ಅಥವಾ ಅವರ ಕುಟುಂಬದ ಸ್ಪರ್ಧೆಗೆ ವಿರೋಧಿಸುತ್ತಿರುವ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಬಣದವರು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ.</p>.<p>ಈ ಬಣದವರು ದಲಿತ ಹೋರಾಟಗಾರ ಸಿ.ಎಂ.ಮುನಿಯಪ್ಪ ಅವರನ್ನು ಕಣಕ್ಕಿಳಿಸಬೇಕೆಂದು ಲಾಬಿ ನಡೆಸಿದ್ದಾರೆ.</p>.<p>ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್, ಬಂಗಾರಪೇಟೆ, ಕೋಲಾರ, ಮಾಲೂರು ಅಲ್ಲದೇ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಪರಿಶಿಷ್ಟ ಜಾತಿಯ ಮತದಾರರಲ್ಲಿ ಬಲಗೈ ಸಮುದಾಯದವರು ಶೇ 75 ಇದ್ದಾರೆ ಎಂಬ ವಾದ ಮುಂದಿಟ್ಟಿದ್ದಾರೆ. ಈ ಕ್ಷೇತ್ರದಲ್ಲಿ 1952ರಿಂದ ಈವರೆಗೆ ಬಲಗೈ ಸಮುದಾಯಕ್ಕೆ ಟಿಕೆಟ್ ಲಭಿಸಿಲ್ಲ.</p>.<p>‘ನಮ್ಮ ಉದ್ದೇಶ ಈ ಬಾರಿ ಬಲಗೈ ಸಮುದಾಯಕ್ಕೆ ಟಿಕೆಟ್ ಸಿಗಬೇಕು. ಈ ಸಮುದಾಯದವರಿಗೆ ಆರಂಭಿಕ ಚುನಾವಣೆಯಿಂದ ಈ ವರೆಗೆ ಕೋಲಾರ ಕ್ಷೇತ್ರದಲ್ಲಿ ಟಿಕೆಟ್ ನೀಡಿಲ್ಲ. ಕೋಲಾರ ಕ್ಷೇತ್ರದಲ್ಲಿ 2019ರ ಚುನಾವಣೆ ರೀತಿಯ ತಪ್ಪುಗಳು ಮರುಕಳಿಸಬಾರದು ಎಂದರೆ ಮುನಿಯಪ್ಪ ಅಥವಾ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದೆಂದು ಒತ್ತಾಯಿಸಿದ್ದೇವೆ’ ಎಂದು ಕೊತ್ತೂರು ಮಂಜುನಾಥ್ ಹೇಳಿದರು.</p>.<p>ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಬಲಗೈ ಸಮುದಾಯದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಟಿಕೆಟ್ಗೆ ಒತ್ತಾಯಿಸುತ್ತಲೇ ಇದ್ದಾರೆ. ಅವರಿಗೆ ತಿರುಗೇಟು ನೀಡಿ ಎಡಗೈ ಸಮುದಾಯದ ಮುಖಂಡರೂ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.</p>.<blockquote>ರಮೇಶ್ ಕುಮಾರ್ ಬಣದಿಂದ ಬಲಗೈ ಸಮುದಾಯಕ್ಕೆ ಟಿಕೆಟ್ಗೆ ಪಟ್ಟು ಎಡಗೈ ಸಮುದಾಯದ ತಮ್ಮ ಕುಟುಂಬಕ್ಕೆ ಕೊಡಿ–ಕೆ.ಎಚ್.ಮುನಿಯಪ್ಪ ವಾದ ಟಿಕೆಟ್ ರೇಸ್ನಲ್ಲಿ ಎಡಗೈ ಸಮುದಾಯದ ಹನುಮಂತಯ್ಯ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರಾಜ್ಯದ ಐದು ಪರಿಶಿಷ್ಟ ಜಾತಿಯ ಲೋಕಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದಡಿ ಕೋಲಾರ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಸಚಿವ ಕೆ.ಎಚ್.ಮುನಿಯಪ್ಪ ಪಟ್ಟು ಹಿಡಿದಿದ್ದಾರೆ.</p>.<p>ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವರಿಕೆ ಮಾಡಿದ್ದು, ಕೋಲಾರ ಮೀಸಲು ಕ್ಷೇತ್ರದಲ್ಲಿ ತಮ್ಮ ಅಳಿಯ ಕೆ.ಜಿ.ಚಿಕ್ಕಪೆದ್ದಣ್ಣ ಅವರಿಗೆ ಬಹುತೇಕ ಟಿಕೆಟ್ ನಿಗದಿಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿದೆ. ಕೆ.ಎಚ್.ಮುನಿಯಪ್ಪ ಕೂಡ ಎಡಗೈ ಸಮುದಾಯಕ್ಕೆ ಸೇರಿದವರು.</p>.<p>‘ಕಾಂಗ್ರೆಸ್ನಲ್ಲಿ ಎರಡು ಕ್ಷೇತ್ರ ದಲಿತ ಬಲಗೈ, ಎರಡು ಕ್ಷೇತ್ರ ಎಡಗೈ ಹಾಗೂ ಒಂದು ಭೋವಿ ಅಥವಾ ಲಂಬಾಣಿ ಸಮುದಾಯಕ್ಕೆ ನೀಡುವುದು ಸಾಮಾನ್ಯವಾಗಿ ನಡೆದುಕೊಂಡು ಬಂದಿದೆ. ಈ ಬಾರಿ ಮೂರು ಕ್ಷೇತ್ರಗಳಲ್ಲಿ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಲಾಗುತ್ತಿದೆ. ಇನ್ನೆರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಅಭಿಪ್ರಾಯವಿದೆ’ ಎಂದು ಮಂಗಳವಾರಷ್ಟೇ ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿದ್ದರು.</p>.<p>ಈಗಾಗಲೇ ವಿಜಯಪುರ, ಕಲಬುರಗಿ ಕ್ಷೇತ್ರದಲ್ಲಿ ಬಲಗೈ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಚಾಮರಾಜನಗರದಲ್ಲೂ ಬಲಗೈ ಸಮುದಾಯಕ್ಕೆ (ಡಾ.ಎಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್) ಸಿಗುವ ಸಾಧ್ಯತೆ ಇದೆ. ಚಿತ್ರದುರ್ಗದಲ್ಲಿ ಎಡಗೈ ಸಮುದಾಯಕ್ಕೆ (ಬಿ.ಎನ್.ಚಂದ್ರಪ್ಪ) ಸಿಕ್ಕಿದ್ದು, 3 ಬಲ+2 ಎಡ ಲೆಕ್ಕಾಚಾರದಲ್ಲಿ ಕೋಲಾರದಲ್ಲೂ ಎಡಗೈ ಸಮುದಾಯಕ್ಕೆ ಸಿಗಬೇಕು ಎಂಬುದು ಅವರ ವಾದವಾಗಿದೆ.</p>.<p>ಈ ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದರೆ ಎಲ್ಲಾ 28 ಕ್ಷೇತ್ರಗಳಲ್ಲಿ ತೊಂದರೆ ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆ ರವಾನಿಸಿರುವುದು ಗೊತ್ತಾಗಿದೆ.</p>.<p>ಕೋಲಾರ ಕ್ಷೇತ್ರದ ಟಿಕೆಟ್ಗಾಗಿ ಹಕ್ಕೊತ್ತಾಯ ಮಾಡುತ್ತಿರುವ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಕೂಡ ಎಡಗೈ ಸಮುದಾಯದವರು.</p>.<p>ವಿಧಾನಸಭೆಯಿಂದ ರಾಜ್ಯಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮರು ಆಯ್ಕೆಗೆ ಅವಕಾಶ ನೀಡಿರಲಿಲ್ಲ. ಈ ಸಂಬಂಧ ಮಾದಿಗ ಸಮುದಾಯದ ಆಕ್ಷೇಪವೂ ವ್ಯಕ್ತವಾಗಿತ್ತು, ಈ ಹಿನ್ನೆಲೆಯಲ್ಲಿ ಅವರನ್ನು ಕಣಕ್ಕಿಳಿಸಲು ಚರ್ಚೆ ನಡೆದಿತ್ತು. ಈಚೆಗೆ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.</p>.<p>ಕೋಲಾರ ಕ್ಷೇತ್ರದಲ್ಲಿ ಸತತವಾಗಿ ಎಂಟು ಬಾರಿ ಸ್ಪರ್ಧಿಸಿರುವ ಕೆ.ಎಚ್.ಮುನಿಯಪ್ಪ ಅಥವಾ ಅವರ ಕುಟುಂಬದ ಸ್ಪರ್ಧೆಗೆ ವಿರೋಧಿಸುತ್ತಿರುವ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಬಣದವರು ಬಲಗೈ ಸಮುದಾಯಕ್ಕೆ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ.</p>.<p>ಈ ಬಣದವರು ದಲಿತ ಹೋರಾಟಗಾರ ಸಿ.ಎಂ.ಮುನಿಯಪ್ಪ ಅವರನ್ನು ಕಣಕ್ಕಿಳಿಸಬೇಕೆಂದು ಲಾಬಿ ನಡೆಸಿದ್ದಾರೆ.</p>.<p>ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್, ಬಂಗಾರಪೇಟೆ, ಕೋಲಾರ, ಮಾಲೂರು ಅಲ್ಲದೇ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಪರಿಶಿಷ್ಟ ಜಾತಿಯ ಮತದಾರರಲ್ಲಿ ಬಲಗೈ ಸಮುದಾಯದವರು ಶೇ 75 ಇದ್ದಾರೆ ಎಂಬ ವಾದ ಮುಂದಿಟ್ಟಿದ್ದಾರೆ. ಈ ಕ್ಷೇತ್ರದಲ್ಲಿ 1952ರಿಂದ ಈವರೆಗೆ ಬಲಗೈ ಸಮುದಾಯಕ್ಕೆ ಟಿಕೆಟ್ ಲಭಿಸಿಲ್ಲ.</p>.<p>‘ನಮ್ಮ ಉದ್ದೇಶ ಈ ಬಾರಿ ಬಲಗೈ ಸಮುದಾಯಕ್ಕೆ ಟಿಕೆಟ್ ಸಿಗಬೇಕು. ಈ ಸಮುದಾಯದವರಿಗೆ ಆರಂಭಿಕ ಚುನಾವಣೆಯಿಂದ ಈ ವರೆಗೆ ಕೋಲಾರ ಕ್ಷೇತ್ರದಲ್ಲಿ ಟಿಕೆಟ್ ನೀಡಿಲ್ಲ. ಕೋಲಾರ ಕ್ಷೇತ್ರದಲ್ಲಿ 2019ರ ಚುನಾವಣೆ ರೀತಿಯ ತಪ್ಪುಗಳು ಮರುಕಳಿಸಬಾರದು ಎಂದರೆ ಮುನಿಯಪ್ಪ ಅಥವಾ ಅವರ ಕುಟುಂಬಕ್ಕೆ ಟಿಕೆಟ್ ನೀಡಬಾರದೆಂದು ಒತ್ತಾಯಿಸಿದ್ದೇವೆ’ ಎಂದು ಕೊತ್ತೂರು ಮಂಜುನಾಥ್ ಹೇಳಿದರು.</p>.<p>ಚುನಾವಣೆ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಬಲಗೈ ಸಮುದಾಯದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಟಿಕೆಟ್ಗೆ ಒತ್ತಾಯಿಸುತ್ತಲೇ ಇದ್ದಾರೆ. ಅವರಿಗೆ ತಿರುಗೇಟು ನೀಡಿ ಎಡಗೈ ಸಮುದಾಯದ ಮುಖಂಡರೂ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.</p>.<blockquote>ರಮೇಶ್ ಕುಮಾರ್ ಬಣದಿಂದ ಬಲಗೈ ಸಮುದಾಯಕ್ಕೆ ಟಿಕೆಟ್ಗೆ ಪಟ್ಟು ಎಡಗೈ ಸಮುದಾಯದ ತಮ್ಮ ಕುಟುಂಬಕ್ಕೆ ಕೊಡಿ–ಕೆ.ಎಚ್.ಮುನಿಯಪ್ಪ ವಾದ ಟಿಕೆಟ್ ರೇಸ್ನಲ್ಲಿ ಎಡಗೈ ಸಮುದಾಯದ ಹನುಮಂತಯ್ಯ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>