ಮುಳಬಾಗಿಲು (ಕೋಲಾರ): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ನಗರದಲ್ಲಿ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶಿಸಿದರು.
ಈ ಮೂಲಕ ಲೋಕಸಭೆ ಚುನಾವಣಾ ಪ್ರಚಾರ ಕಹಳೆ ಮೊಳಗಿಸಿದರು. ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದರು. ಈ ಮೂಲಕ ಚುನಾವಣಾ ಕಣ ಮತ್ತಷ್ಟು ರಂಗೇರಿದೆ.
ಮಾರ್ಚ್ 29ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಕೋಲಾರ ಕ್ಷೇತ್ರದ ಟಿಕೆಟ್ ಬಿಕ್ಕಟ್ಟಿನಿಂದಾಗಿ ಮುಂದೂಡಲಾಗಿತ್ತು.