<p><strong>ಬೇತಮಂಗಲ</strong>: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಬೇತಮಂಗಲ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಪವಿಭಾಗ ಕಚೇರಿಯ ಎಇಇ ಸೇರಿದಂತೆ ಮೂವರು ಬುಧವಾರ ಜಿಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಸಹಾಯ ಕಾರ್ಯಪಾಲಕ ಎಂಜಿನಿಯರ್ (ಎಇಇ) ಶಿವಕುಮಾರ್, ಸಹಾಯಕ ಎಂಜಿನಿಯರ್ (ಎಇ) ರಶ್ಮಿ ಹಾಗೂ ಗುತ್ತಿಗೆ ನೌಕರ ರಾಮಚಂದ್ರಗೌಡ ಸಿಕ್ಕಿಬಿದ್ದಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ.</p>.<p>ಬೇತಮಂಗಲ ಕಚೇರಿ ಅಲ್ಲದೇ, ಬೆಂಗಳೂರಿನ ನಾಗರಬಾವಿಯಲ್ಲಿರುವ ಶಿವಕುಮಾರ್ ಮನೆಯಲ್ಲೂ ಲೋಕಾಯುಕ್ತ ಪೊಲೀಸರು ಶೋಧಿಸಿದ್ದಾರೆ.</p>.<p>ಶಿವಕುಮಾರ್ ಕಾಮಗಾರಿಗಳನ್ನು ಮಾಡಿಸದೆ ಗುತ್ತಿಗೆದಾರರ ಮೂಲಕ ಹಣವನ್ನು ಪಾವತಿಸಿಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದು ಕೆಜಿಎಫ್ ಮೂಲದ ಗುತ್ತಿಗೆದಾರ ಪ್ರವೀಣ್ ಎಂಬುವರು ದೂರು ನೀಡಿದ್ದರು.</p>.<p>ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು. ₹ 2.27 ಲಕ್ಷವನ್ನು ಗುತ್ತಿಗೆದಾರರಿಂದ ಪಡೆಯುತ್ತಿರುವಾಗ ಶಿವಕುಮಾರ್, ರಶ್ಮಿ ಹಾಗೂ ರಾಮಚಂದ್ರಗೌಡ ಟ್ರ್ಯಾಪ್ ಆಗಿದ್ದಾರೆ.</p>.<p>ವಾಟರ್ ವರ್ಕ್ ಪಂಪ್ ಹೌಸ್ಗೆ 11 ಕೆ.ವಿ ಲೈನ್ ಪುನರ್ ಸ್ಥಾಪನೆಗೆ ಕೆಲಸ ಮಾಡದೆಯೇ ಬಿಲ್ ಮಾಡುವುದಕ್ಕೆ ₹ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬುದು ಗೊತ್ತಾಗಿದೆ.</p>.<p>ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಆಂತೋಣಿ ಜಾನ್, ಡಿವೈಎಸ್ಪಿ ಸುಧೀರ್, ಇನ್ಸ್ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ನಾಗರಬಾವಿಯಲ್ಲಿನ ಮನೆಯಲ್ಲಿ ಇನ್ಸ್ಪೆಕ್ಟರ್ ಆಂಜಿನಪ್ಪ, ಸಿಬ್ಬಂದಿ ದೇವ್, ನಾಗವೇಣಿ ಮತ್ತು ಯೋಶೋಧಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಬೇತಮಂಗಲ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಪವಿಭಾಗ ಕಚೇರಿಯ ಎಇಇ ಸೇರಿದಂತೆ ಮೂವರು ಬುಧವಾರ ಜಿಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಸಹಾಯ ಕಾರ್ಯಪಾಲಕ ಎಂಜಿನಿಯರ್ (ಎಇಇ) ಶಿವಕುಮಾರ್, ಸಹಾಯಕ ಎಂಜಿನಿಯರ್ (ಎಇ) ರಶ್ಮಿ ಹಾಗೂ ಗುತ್ತಿಗೆ ನೌಕರ ರಾಮಚಂದ್ರಗೌಡ ಸಿಕ್ಕಿಬಿದ್ದಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದ್ದಾರೆ.</p>.<p>ಬೇತಮಂಗಲ ಕಚೇರಿ ಅಲ್ಲದೇ, ಬೆಂಗಳೂರಿನ ನಾಗರಬಾವಿಯಲ್ಲಿರುವ ಶಿವಕುಮಾರ್ ಮನೆಯಲ್ಲೂ ಲೋಕಾಯುಕ್ತ ಪೊಲೀಸರು ಶೋಧಿಸಿದ್ದಾರೆ.</p>.<p>ಶಿವಕುಮಾರ್ ಕಾಮಗಾರಿಗಳನ್ನು ಮಾಡಿಸದೆ ಗುತ್ತಿಗೆದಾರರ ಮೂಲಕ ಹಣವನ್ನು ಪಾವತಿಸಿಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿದ್ದಾರೆ ಎಂದು ಕೆಜಿಎಫ್ ಮೂಲದ ಗುತ್ತಿಗೆದಾರ ಪ್ರವೀಣ್ ಎಂಬುವರು ದೂರು ನೀಡಿದ್ದರು.</p>.<p>ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು. ₹ 2.27 ಲಕ್ಷವನ್ನು ಗುತ್ತಿಗೆದಾರರಿಂದ ಪಡೆಯುತ್ತಿರುವಾಗ ಶಿವಕುಮಾರ್, ರಶ್ಮಿ ಹಾಗೂ ರಾಮಚಂದ್ರಗೌಡ ಟ್ರ್ಯಾಪ್ ಆಗಿದ್ದಾರೆ.</p>.<p>ವಾಟರ್ ವರ್ಕ್ ಪಂಪ್ ಹೌಸ್ಗೆ 11 ಕೆ.ವಿ ಲೈನ್ ಪುನರ್ ಸ್ಥಾಪನೆಗೆ ಕೆಲಸ ಮಾಡದೆಯೇ ಬಿಲ್ ಮಾಡುವುದಕ್ಕೆ ₹ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬುದು ಗೊತ್ತಾಗಿದೆ.</p>.<p>ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಆಂತೋಣಿ ಜಾನ್, ಡಿವೈಎಸ್ಪಿ ಸುಧೀರ್, ಇನ್ಸ್ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ದಾಳಿ ನಡೆದಿದೆ. ಬೆಂಗಳೂರಿನ ನಾಗರಬಾವಿಯಲ್ಲಿನ ಮನೆಯಲ್ಲಿ ಇನ್ಸ್ಪೆಕ್ಟರ್ ಆಂಜಿನಪ್ಪ, ಸಿಬ್ಬಂದಿ ದೇವ್, ನಾಗವೇಣಿ ಮತ್ತು ಯೋಶೋಧಾ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>