<p><strong>ಕೋಲಾರ:</strong> ಹೋಂ ಗಾರ್ಡ್ಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲು ಲಂಚ ಪಡೆಯುತ್ತಿದ್ದ ಮಧ್ಯವರ್ತಿ ಹೋಂ ಗಾರ್ಡ್ ಮಂಜುನಾಥ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. </p><p>ಮತ್ತೊಬ್ಬ ಮಧ್ಯವರ್ತಿ ನಿವೃತ್ತ ಹೋಂ ಗಾರ್ಡ್ ಮುನಿಯಪ್ಪ ಹಾಗೂ ಇನ್ಸ್ಪೆಕ್ಟರ್ ಮಹೇಶ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.</p><p>ಲೋಕಾಯುಕ್ತ ಜಿಲ್ಲಾ ಅಧೀಕ್ಷಕ ಆ್ಯಂಟೋನಿ ಜಾನ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.</p><p>ಹೋಂ ಗಾರ್ಡ್ ಆಗಿರುವ ದೂರುದಾರ ಮುರಳಿ ನೀಡಿದ ದೂರಿನ ಮೇರೆಗೆ ಬಂಗಾರಪೇಟೆ ತಾಲ್ಲೂಕಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ದಾಖಲಾಗಿದೆ.</p><p>ಮುರಳಿ ಅವರನ್ನು ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ನಿಯೋಜಿಸಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಇದಾಗಿದೆ. ಈ ಹಿಂದೆ ಕೆಜಿಎಫ್ನ ಆ್ಯಂಡರ್ಸನ್ಪೇಟೆ ಪೊಲೀಸ್ ಠಾಣೆಗೆ ನಿಯೋಜಿಸಲು ಕೂಡ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಎರಡೂ ಸೇರಿ ಒಟ್ಟು ₹ 6 ಸಾವಿರಕ್ಕೆ ಬೇಡಿಕೆ ಇಡಲಾಗಿತ್ತು.</p><p>ಅದರಂತೆ ಮುರಳಿ ಅವರು ಮಧ್ಯವರ್ತಿ ಹೋಂ ಗಾರ್ಡ್ ಮಂಜುನಾಥ್ ಎಂಬುವರಿಗೆ ಫೋನ್ಪೇ ಮೂಲಕ ₹ 5 ಸಾವಿರ ನೀಡಿದ್ದಾರೆ. ನಂತರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಉಳಿದ ₹ 1 ಸಾವಿರ ಪಡೆಯುತ್ತಿದ್ದ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ. </p><p>ಮಂಜುನಾಥ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ನಿವೃತ್ತ ಹೋಂ ಗಾರ್ಡ್ ಮುನಿಯಪ್ಪ ಕೂಡ ಈ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಲಂಚ ಪಡೆಯುತ್ತಿರುವುದು ಗೊತ್ತಾಗಿದೆ. ಹೀಗಾಗಿ, ಮುನಿಯಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಮಹೇಶ್ ಅವರಿಗೆ ಹಣ ರವಾನೆ ಆಗುವ ವಿಚಾರ ಪ್ರಸ್ತಾಪವಾಗಿದೆ. ಮಹೇಶ್ ಅವರು ಹೋಂ ಗಾರ್ಡ್ಗಳನ್ನು ವಿವಿಧ ಠಾಣೆಗಳಿಗೆ ನಿಯೋಜನೆ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. </p><p>‘ಮಧ್ಯವರ್ತಿ ಹೋಂ ಗಾರ್ಡ್ ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ಹೋಂ ಗಾರ್ಡ್ ಮುನಿಯಪ್ಪ ಹಾಗೂ ಇನ್ಸ್ಪೆಕ್ಟರ್ ಮಹೇಶ್ ಅವರನ್ನು ತನಿಖೆಗೆ ಒಳಪಡಿಸಿದ್ದು, ಅಗತ್ಯಬಿದ್ದರೆ ಬಂಧಿಸುತ್ತೇವೆ’ ಎಂದು ಆ್ಯಂಟೋನಿ ಜಾನ್ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ಫೋನ್ಪೇನಲ್ಲಿ ಹಣ ರವಾನೆ ಆಗಿರುವ ಮಾಹಿತಿ ಸಿಕ್ಕಿದೆ. ಈ ಸಂಬಂಧ ದಾಖಲೆಗಳು ಲಭಿಸಿವೆ. ಟ್ರ್ಯಾಪ್ ವೇಳೆ ಲಭಿಸಿದ ₹ 1 ಸಾವಿರವನ್ನು ವಶಕ್ಕೆ ಪಡೆದಿದ್ದೇವೆ’ ಎಂದರು.</p><p>‘ಈ ಪ್ರಕರಣವನ್ನು ಬಹಳ ದಿನಗಳಿಂದ ಬೆನ್ನು ಹತ್ತಿ ತನಿಖೆ ನಡೆಸುತ್ತಿದ್ದೇವೆ. ಇನ್ನೂ ಕೆಲ ಹೋಂ ಗಾರ್ಡ್ಗಳ ಕರ್ತವ್ಯ ನಿಯೋಜನೆಗೆ ಲಂಚ ಪಡೆಯುತ್ತಿರುವ ವಿಚಾರ ಗೊತ್ತಾಗಿದೆ. ವಸೂಲಿಗೆಂದು ಕೆಲ ಹೋಂ ಗಾರ್ಡ್ಗಳನ್ನು ನಿಯೋಜನೆ ಮಾಡಿಕೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಹೋಂ ಗಾರ್ಡ್ಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲು ಲಂಚ ಪಡೆಯುತ್ತಿದ್ದ ಮಧ್ಯವರ್ತಿ ಹೋಂ ಗಾರ್ಡ್ ಮಂಜುನಾಥ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ರಾತ್ರಿ ಬಂಧಿಸಿದ್ದಾರೆ. </p><p>ಮತ್ತೊಬ್ಬ ಮಧ್ಯವರ್ತಿ ನಿವೃತ್ತ ಹೋಂ ಗಾರ್ಡ್ ಮುನಿಯಪ್ಪ ಹಾಗೂ ಇನ್ಸ್ಪೆಕ್ಟರ್ ಮಹೇಶ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.</p><p>ಲೋಕಾಯುಕ್ತ ಜಿಲ್ಲಾ ಅಧೀಕ್ಷಕ ಆ್ಯಂಟೋನಿ ಜಾನ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.</p><p>ಹೋಂ ಗಾರ್ಡ್ ಆಗಿರುವ ದೂರುದಾರ ಮುರಳಿ ನೀಡಿದ ದೂರಿನ ಮೇರೆಗೆ ಬಂಗಾರಪೇಟೆ ತಾಲ್ಲೂಕಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಕರಣ ದಾಖಲಾಗಿದೆ.</p><p>ಮುರಳಿ ಅವರನ್ನು ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ನಿಯೋಜಿಸಲು ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ ಇದಾಗಿದೆ. ಈ ಹಿಂದೆ ಕೆಜಿಎಫ್ನ ಆ್ಯಂಡರ್ಸನ್ಪೇಟೆ ಪೊಲೀಸ್ ಠಾಣೆಗೆ ನಿಯೋಜಿಸಲು ಕೂಡ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಎರಡೂ ಸೇರಿ ಒಟ್ಟು ₹ 6 ಸಾವಿರಕ್ಕೆ ಬೇಡಿಕೆ ಇಡಲಾಗಿತ್ತು.</p><p>ಅದರಂತೆ ಮುರಳಿ ಅವರು ಮಧ್ಯವರ್ತಿ ಹೋಂ ಗಾರ್ಡ್ ಮಂಜುನಾಥ್ ಎಂಬುವರಿಗೆ ಫೋನ್ಪೇ ಮೂಲಕ ₹ 5 ಸಾವಿರ ನೀಡಿದ್ದಾರೆ. ನಂತರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಉಳಿದ ₹ 1 ಸಾವಿರ ಪಡೆಯುತ್ತಿದ್ದ ಮಂಜುನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದಾರೆ. </p><p>ಮಂಜುನಾಥ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ನಿವೃತ್ತ ಹೋಂ ಗಾರ್ಡ್ ಮುನಿಯಪ್ಪ ಕೂಡ ಈ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಲಂಚ ಪಡೆಯುತ್ತಿರುವುದು ಗೊತ್ತಾಗಿದೆ. ಹೀಗಾಗಿ, ಮುನಿಯಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಇನ್ಸ್ಪೆಕ್ಟರ್ ಮಹೇಶ್ ಅವರಿಗೆ ಹಣ ರವಾನೆ ಆಗುವ ವಿಚಾರ ಪ್ರಸ್ತಾಪವಾಗಿದೆ. ಮಹೇಶ್ ಅವರು ಹೋಂ ಗಾರ್ಡ್ಗಳನ್ನು ವಿವಿಧ ಠಾಣೆಗಳಿಗೆ ನಿಯೋಜನೆ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. </p><p>‘ಮಧ್ಯವರ್ತಿ ಹೋಂ ಗಾರ್ಡ್ ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ಹೋಂ ಗಾರ್ಡ್ ಮುನಿಯಪ್ಪ ಹಾಗೂ ಇನ್ಸ್ಪೆಕ್ಟರ್ ಮಹೇಶ್ ಅವರನ್ನು ತನಿಖೆಗೆ ಒಳಪಡಿಸಿದ್ದು, ಅಗತ್ಯಬಿದ್ದರೆ ಬಂಧಿಸುತ್ತೇವೆ’ ಎಂದು ಆ್ಯಂಟೋನಿ ಜಾನ್ ‘ಪ್ರಜಾವಾಣಿ’ಗೆ ತಿಳಿಸಿದರು.</p><p>‘ಫೋನ್ಪೇನಲ್ಲಿ ಹಣ ರವಾನೆ ಆಗಿರುವ ಮಾಹಿತಿ ಸಿಕ್ಕಿದೆ. ಈ ಸಂಬಂಧ ದಾಖಲೆಗಳು ಲಭಿಸಿವೆ. ಟ್ರ್ಯಾಪ್ ವೇಳೆ ಲಭಿಸಿದ ₹ 1 ಸಾವಿರವನ್ನು ವಶಕ್ಕೆ ಪಡೆದಿದ್ದೇವೆ’ ಎಂದರು.</p><p>‘ಈ ಪ್ರಕರಣವನ್ನು ಬಹಳ ದಿನಗಳಿಂದ ಬೆನ್ನು ಹತ್ತಿ ತನಿಖೆ ನಡೆಸುತ್ತಿದ್ದೇವೆ. ಇನ್ನೂ ಕೆಲ ಹೋಂ ಗಾರ್ಡ್ಗಳ ಕರ್ತವ್ಯ ನಿಯೋಜನೆಗೆ ಲಂಚ ಪಡೆಯುತ್ತಿರುವ ವಿಚಾರ ಗೊತ್ತಾಗಿದೆ. ವಸೂಲಿಗೆಂದು ಕೆಲ ಹೋಂ ಗಾರ್ಡ್ಗಳನ್ನು ನಿಯೋಜನೆ ಮಾಡಿಕೊಂಡಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>