<p><strong>ಮಾಲೂರು (ಕೋಲಾರ):</strong> ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಬಹುದು ಎಂಬ ಆತಂಕದಲ್ಲಿ ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲು ನಿಲ್ದಾಣ ಬಳಿ ಗುರುವಾರ ಯುವ ಪ್ರೇಮಿಗಳು ರೈಲಿಗೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಟೇಕಲ್ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದ ಸತೀಶ್ (18) ಹಾಗೂ ಪನಮಾಕನಹಳ್ಳಿ ಗ್ರಾಮದ ಶ್ವೇತಾ (17) ಆತ್ಮಹತ್ಯೆ ಮಾಡಿಕೊಂಡವರು. </p>.<p>ಒಂದು ವರ್ಷದಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಶೇತಾ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ, ಸತೀಶ್ ತಿಗಳರ ಸಮುದಾಯದವರು ಎಂಬುದು ಗೊತ್ತಾಗಿದೆ. ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆ ಮುಂದೆ ಕಷ್ಟವಾಗಬಹುದು ಎಂಬ ಭಯದಲ್ಲಿ ಈ ಕೃತ್ಯ ಎಸಗಿಕೊಂಡಿದ್ದಾರೆ ಎನ್ನಲಾಗಿದೆ.</p>.<p>ರೈಲು ನಿಲ್ದಾಣದಲ್ಲಿ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿ, ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಪರಸ್ಪರ ತಬ್ಬಿಕೊಂಡು ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ನಿಲುಗಡೆ ಮಾಡುವಷ್ಟರಲ್ಲಿ ದೇಹ ಛಿದ್ರಗೊಂಡಿತ್ತು. </p>.<p>ಸತೀಶ್ ಬುಧವಾರವಷ್ಟೇ ತಮ್ಮ 18ನೇ ಜನ್ಮದಿನ ಆಚರಿಸಿಕೊಂಡಿದ್ದರು. ಶ್ವೇತಾ ಮಾಲೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತ್ತಿದ್ದರು. ಐಟಿಐ ಮುಗಿಸಿ ಕೆಲಸ ಹುಡುಕುತ್ತಿದ್ದ ಸತೀಶ್, ಕೂಲಿ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ದಂಡು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು (ಕೋಲಾರ):</strong> ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಬಹುದು ಎಂಬ ಆತಂಕದಲ್ಲಿ ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲು ನಿಲ್ದಾಣ ಬಳಿ ಗುರುವಾರ ಯುವ ಪ್ರೇಮಿಗಳು ರೈಲಿಗೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಟೇಕಲ್ ಹೋಬಳಿಯ ಶೆಟ್ಟಿಹಳ್ಳಿ ಗ್ರಾಮದ ಸತೀಶ್ (18) ಹಾಗೂ ಪನಮಾಕನಹಳ್ಳಿ ಗ್ರಾಮದ ಶ್ವೇತಾ (17) ಆತ್ಮಹತ್ಯೆ ಮಾಡಿಕೊಂಡವರು. </p>.<p>ಒಂದು ವರ್ಷದಿಂದ ಇಬ್ಬರೂ ಪ್ರೀತಿಸುತ್ತಿದ್ದರು. ಶೇತಾ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ, ಸತೀಶ್ ತಿಗಳರ ಸಮುದಾಯದವರು ಎಂಬುದು ಗೊತ್ತಾಗಿದೆ. ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದರೆ ಮುಂದೆ ಕಷ್ಟವಾಗಬಹುದು ಎಂಬ ಭಯದಲ್ಲಿ ಈ ಕೃತ್ಯ ಎಸಗಿಕೊಂಡಿದ್ದಾರೆ ಎನ್ನಲಾಗಿದೆ.</p>.<p>ರೈಲು ನಿಲ್ದಾಣದಲ್ಲಿ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿ, ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ಪರಸ್ಪರ ತಬ್ಬಿಕೊಂಡು ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ನಿಲುಗಡೆ ಮಾಡುವಷ್ಟರಲ್ಲಿ ದೇಹ ಛಿದ್ರಗೊಂಡಿತ್ತು. </p>.<p>ಸತೀಶ್ ಬುಧವಾರವಷ್ಟೇ ತಮ್ಮ 18ನೇ ಜನ್ಮದಿನ ಆಚರಿಸಿಕೊಂಡಿದ್ದರು. ಶ್ವೇತಾ ಮಾಲೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತ್ತಿದ್ದರು. ಐಟಿಐ ಮುಗಿಸಿ ಕೆಲಸ ಹುಡುಕುತ್ತಿದ್ದ ಸತೀಶ್, ಕೂಲಿ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ದಂಡು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>