‘ಪ್ರತಿಯೊಬ್ಬರಿಗೂ ಸ್ವಚ್ಛಗಾಳಿ, ಶುದ್ಧ ಕುಡಿಯುವ ನೀರು, ಪೂರಕ ಪೌಷ್ಠಿಕಾಂಶಯುಕ್ತ ಆಹಾರ ಅವಶ್ಯ. ಉತ್ತಮ ಪರಿಸರ ಕಾಯ್ದುಕೊಳ್ಳಲು ಶ್ರಮಿಸುತ್ತಿರುವ ಪೌರಕಾರ್ಮಿಕರು ದಿನನಿತ್ಯ ತ್ಯಾಜ್ಯ, ಗಲೀಜು ತುಂಬಿದ ಚರಂಡಿಗಳಲ್ಲಿ ಇಳಿದು ಸ್ವಚ್ಛ ಮಾಡುತ್ತಾರೆ, ರಸ್ತೆ ಬದಿಯಲ್ಲಿನ ಮಣ್ಣು, ಬೆಳೆದ ಗಿಡಿಗಂಟಿ ತೆರೆವುಗೊಳಿಸುತ್ತಾರೆ. ಮನೆಮನೆಗೆ ತೆರಳಿ ಒಣ ಮತ್ತು ಘನ ತ್ಯಾಜ್ಯ ಸಂಗ್ರಹಿಸಿ ಸಾಗಾಣಿಕೆ ಮಾಡುತ್ತಾರೆ. ಅಂತಹ ಕಾರ್ಮಿಕರನ್ನು ಮಾನವೀಯತೆಯೊಂದಿಗೆ ಆರೋಗ್ಯವಾಗಿರಲು ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.